Advertisement
MIRROR FOCUS

ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |

Share

ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಣೆ ನಡೆಯುತ್ತಿದ್ದರೂ ಸರ್ಕಾರದ ನಿಷ್ಕ್ರಿಯತೆ ಕುರಿತು ಹೈಕೋರ್ಟ್‌ ಪ್ರಶ್ನಿಸಿದೆ. 2021 ರಲ್ಲಿ ದಾಖಲಾದ ಎಫ್‌ಐಆರ್‌ನ ಮೇಲೆ ಏಕೆ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿದೆ. ಸುದೀರ್ಘ ಸಮಯದ ಬಳಿಕವೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಗೌಹಾಟಿ ಹೈಕೋರ್ಟ್‌ನ ನ್ಯಾಯ ಪೀಠವು ಕೇಳಿದೆ. 

Advertisement
Advertisement

ಅಡಿಕೆ ಸಾಗಾಟದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ  ಮಿಜೋರಾಂ ಸಾಮಾಜಿಕ ಕಾರ್ಯಕರ್ತ ವನ್ರಾಮ್‌ ಚುವಾಂಗಿ ಅವರು ಸಲ್ಲಿಸಿದ್ದರು. ಮಿಜೋರಾಂನಿಂದ ಇತರ ಪ್ರದೇಶಗಳಿಗೆ  ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವುದು ಕಂಡುಬರುತ್ತಿದೆ. ಈ ಅಕ್ರಮ ಸಾಗಾಟ ತಡೆಯುವ ಬಗ್ಗೆ ಮನವಿ ಮಾಡಲಾಗಿದ್ದರೂ ನಿರಂತರ ಸಾಗಾಟವಾಗುತ್ತಿತ್ತು.  ಈ ಸಮಸ್ಯೆ ಎತ್ತಿ ತೋರಿಸಿದೆ ಮತ್ತು ಈ ಅಕ್ರಮ ವ್ಯಾಪಾರವನ್ನು ಪರಿಹರಿಸುವಲ್ಲಿ ರಾಜ್ಯದ ನಿಷ್ಕ್ರಿಯತೆಯನ್ನು ಆರೋಪಿಸಿದೆ. ಸಂಬಂಧಪಟ್ಟ ಇಲಾಖೆಯು ನಕಲಿ ಇ-ವೇ ಬಿಲ್‌ಗಳನ್ನು ನೀಡಿ ಕಳ್ಳಸಾಗಣೆ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.ಜನವರಿ 22, 2024 ರಂದು ನ್ಯಾಯಾಲಯದ ಆದೇಶದಲ್ಲಿ, ಸಂಬಂಧಪಟ್ಟ ಇಲಾಖೆಗಳ ಇ-ವೇ ಬಿಲ್‌ಗಳ ವಿತರಣೆಯಲ್ಲಿನ ಅಕ್ರಮಗಳ  ಬಗ್ಗೆ ಹೈಕೋರ್ಟ್ ಈಗಾಗಲೇ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

Advertisement

ಮೂರು ವರ್ಷಗಳಿಂದ ಸಮಸ್ಯೆ ಬಗೆಹರಿಯದೆ ಕಾಲಹರಣ ಮಾಡಿದ್ದರೂ 2024ರ ಜನವರಿ 22ರಿಂದ ನ್ಯಾಯಾಲಯದ ಆದೇಶವನ್ನು ಏಕೆ ಸಂಪೂರ್ಣವಾಗಿ ಪಾಲಿಸಿಲ್ಲ ಎಂಬುದನ್ನು ವಿವರಿಸಿ ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಮಿಜೋರಾಂನ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. 2021 ರಲ್ಲಿ ಅರ್ಜಿದಾರರು ಸಲ್ಲಿಸಿದ ಎಫ್‌ಐಆರ್ ಅನ್ನು ದಾಖಲಿಸಲು ವಿಫಲವಾದ ಬಗ್ಗೆ ವಿವರಿಸುವ ವೈಯಕ್ತಿಕ ಅಫಿಡವಿಟ್ ಅನ್ನು ಸಲ್ಲಿಸಲು ಚಂಫೈ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಗೆ ಆದೇಶಿಸಲಾಗಿದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 26-06-2024 | ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ | ಉಳಿದೆಡೆ ಸಾಮಾನ್ಯ ಮಳೆ |

ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ…

42 mins ago

ಪರೀಕ್ಷಾ ಅಕ್ರಮಗಳು.. | ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ…

ಭಾರತ(India) ಈ ಕ್ಷಣದಲ್ಲಿ, ಅಂತರಾಷ್ಟ್ರೀಯ(International) ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ(Developing) ಹೊಂದುತ್ತಿದೆ,…

2 hours ago

ರೈತರಿಗೋಸ್ಕರ ಹಾಲಿನ ದರ ಪರಿಷ್ಕರಣೆ | ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ | ಡಿಸಿಎಂ ಡಿಕೆ ಶಿವಕುಮಾರ್

ಹಾಲಿನ ದರ ಏರಿಕೆಯಿಂದ ರೈತರಿಗೂ ಲಾಭದ ಪಾಲು ಸಿಗಲಿದೆ, ಸಂಕಷ್ಟದಲ್ಲಿರುವ ಹೈನುಗಾರರಿಗೆ ನೆರವಾಗಲು…

2 hours ago

ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ | ಚುನಾವಣೆ ಮೂಲಕ ನಡೆದ ಸಭಾಪತಿ ಆಯ್ಕೆ |

ಕಳೆದ ಒಂದು ವಾರದಿಂದ ಭಾರಿ ಕುತೂಹಲ ಮೂಡಿಸಿದ್ದ ಲೋಕಸಭೆ ಸ್ಪೀಕರ್‌(Lok sabha speaker)…

3 hours ago

ಮುಂಗಾರು ಚುರುಕು | ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ | ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣ

ಕಾವೇರಿ ಜಲಾನಯನ(cauvery belt) ಪ್ರದೇಶದಲ್ಲಿ ಮುಂಗಾರು (Monsoon) ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ…

3 hours ago

ಡೆಂಗ್ಯು ಬಳಿಕ ಏನೇನು ಆಹಾರ ಸ್ವೀಕರಿಸಬೇಕು ? | ಡಾ.ರವಿಕಿರಣ ಪಟವರ್ಧನ ಅವರ ಸಲಹೆಗಳು..

ಡೆಂಗ್ಯು ನಂತರ ಹೇಳಿದ ಆಹಾರವನ್ನು ಸ್ವೀಕರಿದರೆ ರೋಗ,ರೋಗದ ನಂತರದ ಹಲವು ತೊಂದರೆಗಳು ಸುಲಭ ನಿವಾರಣೆಯಾಗಬಹುದು.…

1 day ago