Advertisement
MIRROR FOCUS

ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |

Share

ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಣೆ ನಡೆಯುತ್ತಿದ್ದರೂ ಸರ್ಕಾರದ ನಿಷ್ಕ್ರಿಯತೆ ಕುರಿತು ಹೈಕೋರ್ಟ್‌ ಪ್ರಶ್ನಿಸಿದೆ. 2021 ರಲ್ಲಿ ದಾಖಲಾದ ಎಫ್‌ಐಆರ್‌ನ ಮೇಲೆ ಏಕೆ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿದೆ. ಸುದೀರ್ಘ ಸಮಯದ ಬಳಿಕವೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಗೌಹಾಟಿ ಹೈಕೋರ್ಟ್‌ನ ನ್ಯಾಯ ಪೀಠವು ಕೇಳಿದೆ. 

ಅಡಿಕೆ ಸಾಗಾಟದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ  ಮಿಜೋರಾಂ ಸಾಮಾಜಿಕ ಕಾರ್ಯಕರ್ತ ವನ್ರಾಮ್‌ ಚುವಾಂಗಿ ಅವರು ಸಲ್ಲಿಸಿದ್ದರು. ಮಿಜೋರಾಂನಿಂದ ಇತರ ಪ್ರದೇಶಗಳಿಗೆ  ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವುದು ಕಂಡುಬರುತ್ತಿದೆ. ಈ ಅಕ್ರಮ ಸಾಗಾಟ ತಡೆಯುವ ಬಗ್ಗೆ ಮನವಿ ಮಾಡಲಾಗಿದ್ದರೂ ನಿರಂತರ ಸಾಗಾಟವಾಗುತ್ತಿತ್ತು.  ಈ ಸಮಸ್ಯೆ ಎತ್ತಿ ತೋರಿಸಿದೆ ಮತ್ತು ಈ ಅಕ್ರಮ ವ್ಯಾಪಾರವನ್ನು ಪರಿಹರಿಸುವಲ್ಲಿ ರಾಜ್ಯದ ನಿಷ್ಕ್ರಿಯತೆಯನ್ನು ಆರೋಪಿಸಿದೆ. ಸಂಬಂಧಪಟ್ಟ ಇಲಾಖೆಯು ನಕಲಿ ಇ-ವೇ ಬಿಲ್‌ಗಳನ್ನು ನೀಡಿ ಕಳ್ಳಸಾಗಣೆ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.ಜನವರಿ 22, 2024 ರಂದು ನ್ಯಾಯಾಲಯದ ಆದೇಶದಲ್ಲಿ, ಸಂಬಂಧಪಟ್ಟ ಇಲಾಖೆಗಳ ಇ-ವೇ ಬಿಲ್‌ಗಳ ವಿತರಣೆಯಲ್ಲಿನ ಅಕ್ರಮಗಳ  ಬಗ್ಗೆ ಹೈಕೋರ್ಟ್ ಈಗಾಗಲೇ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

ಮೂರು ವರ್ಷಗಳಿಂದ ಸಮಸ್ಯೆ ಬಗೆಹರಿಯದೆ ಕಾಲಹರಣ ಮಾಡಿದ್ದರೂ 2024ರ ಜನವರಿ 22ರಿಂದ ನ್ಯಾಯಾಲಯದ ಆದೇಶವನ್ನು ಏಕೆ ಸಂಪೂರ್ಣವಾಗಿ ಪಾಲಿಸಿಲ್ಲ ಎಂಬುದನ್ನು ವಿವರಿಸಿ ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಮಿಜೋರಾಂನ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. 2021 ರಲ್ಲಿ ಅರ್ಜಿದಾರರು ಸಲ್ಲಿಸಿದ ಎಫ್‌ಐಆರ್ ಅನ್ನು ದಾಖಲಿಸಲು ವಿಫಲವಾದ ಬಗ್ಗೆ ವಿವರಿಸುವ ವೈಯಕ್ತಿಕ ಅಫಿಡವಿಟ್ ಅನ್ನು ಸಲ್ಲಿಸಲು ಚಂಫೈ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಗೆ ಆದೇಶಿಸಲಾಗಿದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

16 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago