#ಸೇವೆ | ಪ್ರವಾಹ ಪೀಡಿತ ಪ್ರದೇಶದಲ್ಲಿ ದಣಿವರಿಯದ ಸೇವೆಯಲ್ಲಿ SSF ಯುವ ಸೇವಾ ತಂಡ |

August 8, 2022
6:18 PM

ಕಳೆದ ಹಲವು ದಿನಗಳಿಂದ ಸಂಪಾಜೆ, ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಪ್ರದೇಶದ ಜನರ ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮತ್ತು ಸಹಾಯಕ್ಕೆ ನಿರಂತರವಾಗಿ ದಣಿವರಿಯದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ನಿರಂತರ ಸೇವಾ ಕಾರ್ಯ ಮಾಡುತ್ತಿದೆ.

Advertisement

ತೀವ್ರ ಮಳೆಯ ಪರಿಣಾಮ ಕಲ್ಲುಗುಂಡಿ ಮಸೀದಿ ತಡೆಗೋಡೆ ಕಳಚಿ ಬಿದ್ದಿದ್ದು ಅದರ ಅವಶೇಷಗಳನ್ನು, ಕಲ್ಲುಗಳನ್ನೂ ಬದಿಗಿಟ್ಟು ಸ್ಥಳ ಅಚ್ಚುಕಟ್ಟಾಗಿಡಲು ಸಹಕರಿಸಿದರು. ಕಲ್ಲುಗುಂಡಿ ಬಾಲಂಬಿ ಸೇತುವೆಯಲ್ಲಿ ಸಿಲುಕಿದ್ದ ಭಾರೀ ಗಾತ್ರದ ಮರ ಮತ್ತು ಬಿದಿರುಗಳನ್ನು ತೆರವುಗೊಳಿಸಲು  ಕಾರ್ಯಾಚರಣೆ ನಡೆಸಿ ಕ್ರೈನ್ ಮುಖಾಂತರ ಬೃಹದಾಕಾರದ ಮರದ ದಿಮ್ಮಿಗಳನ್ನು ಮೇಲಕ್ಕೆತ್ತಿದರು. ನೀರಿನಲ್ಲಿ ಬಂದ ಬಿದಿರುಗಳ ಸಹಿತವಿರುವ ಬಲ್ಲೆಗಳು ಸೇತುವೆಯ ನೀರು ಹೋಗುವ ದ್ವಾರವನ್ನು ಮುಚ್ಚಿದನ್ನು ಗಮನಿಸಿದ ಕಾರ್ಯಕರ್ತರು ಅವುಗಳನ್ನು ತೆರವುಗೊಳಿಸಿ ಶುಚೀಕರಿಸಿದರು.

ಕಲ್ಲುಗುಂಡಿಯಲ್ಲಿ ಸತತವಾಗಿ ಎಸ್ಸೆಸ್ಸಫ್ ಹಾಗೂ ಎಸ್ ವೈ ಎಸ್ ತುರ್ತು ಸೇವಾ ತಂಡದ ಕಾರ್ಯಕರ್ತರು ಸೇವಾ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದಾರೆ. ಈ ಕಾರ್ಯಾಚರಣೆಗೆ ಪಂಚಾಯತ್ ಅಧ್ಯಕ್ಷ ಜಿ.ಕೆ ಹಮೀದ್ ಸಹಿತ ಜನಪ್ರತಿನಿಧಿಗಳು ಸಾಥ್ ಕೊಟ್ಟಿದ್ದರು. ಸಾರ್ವಜನಿಕರು ಕಾರ್ಯಕರ್ತರ ಶ್ರಮದಾನವನ್ನು ಅಭಿನಂದಿಸಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |
May 1, 2025
1:42 PM
by: ಸಾಯಿಶೇಖರ್ ಕರಿಕಳ
ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ
May 1, 2025
7:55 AM
by: The Rural Mirror ಸುದ್ದಿಜಾಲ
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |
May 1, 2025
7:38 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group