#ಸೇವೆ | ಪ್ರವಾಹ ಪೀಡಿತ ಪ್ರದೇಶದಲ್ಲಿ ದಣಿವರಿಯದ ಸೇವೆಯಲ್ಲಿ SSF ಯುವ ಸೇವಾ ತಂಡ |

August 8, 2022
6:18 PM

ಕಳೆದ ಹಲವು ದಿನಗಳಿಂದ ಸಂಪಾಜೆ, ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಪ್ರದೇಶದ ಜನರ ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮತ್ತು ಸಹಾಯಕ್ಕೆ ನಿರಂತರವಾಗಿ ದಣಿವರಿಯದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ನಿರಂತರ ಸೇವಾ ಕಾರ್ಯ ಮಾಡುತ್ತಿದೆ.

ತೀವ್ರ ಮಳೆಯ ಪರಿಣಾಮ ಕಲ್ಲುಗುಂಡಿ ಮಸೀದಿ ತಡೆಗೋಡೆ ಕಳಚಿ ಬಿದ್ದಿದ್ದು ಅದರ ಅವಶೇಷಗಳನ್ನು, ಕಲ್ಲುಗಳನ್ನೂ ಬದಿಗಿಟ್ಟು ಸ್ಥಳ ಅಚ್ಚುಕಟ್ಟಾಗಿಡಲು ಸಹಕರಿಸಿದರು. ಕಲ್ಲುಗುಂಡಿ ಬಾಲಂಬಿ ಸೇತುವೆಯಲ್ಲಿ ಸಿಲುಕಿದ್ದ ಭಾರೀ ಗಾತ್ರದ ಮರ ಮತ್ತು ಬಿದಿರುಗಳನ್ನು ತೆರವುಗೊಳಿಸಲು  ಕಾರ್ಯಾಚರಣೆ ನಡೆಸಿ ಕ್ರೈನ್ ಮುಖಾಂತರ ಬೃಹದಾಕಾರದ ಮರದ ದಿಮ್ಮಿಗಳನ್ನು ಮೇಲಕ್ಕೆತ್ತಿದರು. ನೀರಿನಲ್ಲಿ ಬಂದ ಬಿದಿರುಗಳ ಸಹಿತವಿರುವ ಬಲ್ಲೆಗಳು ಸೇತುವೆಯ ನೀರು ಹೋಗುವ ದ್ವಾರವನ್ನು ಮುಚ್ಚಿದನ್ನು ಗಮನಿಸಿದ ಕಾರ್ಯಕರ್ತರು ಅವುಗಳನ್ನು ತೆರವುಗೊಳಿಸಿ ಶುಚೀಕರಿಸಿದರು.

ಕಲ್ಲುಗುಂಡಿಯಲ್ಲಿ ಸತತವಾಗಿ ಎಸ್ಸೆಸ್ಸಫ್ ಹಾಗೂ ಎಸ್ ವೈ ಎಸ್ ತುರ್ತು ಸೇವಾ ತಂಡದ ಕಾರ್ಯಕರ್ತರು ಸೇವಾ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದಾರೆ. ಈ ಕಾರ್ಯಾಚರಣೆಗೆ ಪಂಚಾಯತ್ ಅಧ್ಯಕ್ಷ ಜಿ.ಕೆ ಹಮೀದ್ ಸಹಿತ ಜನಪ್ರತಿನಿಧಿಗಳು ಸಾಥ್ ಕೊಟ್ಟಿದ್ದರು. ಸಾರ್ವಜನಿಕರು ಕಾರ್ಯಕರ್ತರ ಶ್ರಮದಾನವನ್ನು ಅಭಿನಂದಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror