ಸುದ್ದಿಗಳು

#ಸೇವೆ | ಪ್ರವಾಹ ಪೀಡಿತ ಪ್ರದೇಶದಲ್ಲಿ ದಣಿವರಿಯದ ಸೇವೆಯಲ್ಲಿ SSF ಯುವ ಸೇವಾ ತಂಡ |

Share

ಕಳೆದ ಹಲವು ದಿನಗಳಿಂದ ಸಂಪಾಜೆ, ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಪ್ರದೇಶದ ಜನರ ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮತ್ತು ಸಹಾಯಕ್ಕೆ ನಿರಂತರವಾಗಿ ದಣಿವರಿಯದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ನಿರಂತರ ಸೇವಾ ಕಾರ್ಯ ಮಾಡುತ್ತಿದೆ.

ತೀವ್ರ ಮಳೆಯ ಪರಿಣಾಮ ಕಲ್ಲುಗುಂಡಿ ಮಸೀದಿ ತಡೆಗೋಡೆ ಕಳಚಿ ಬಿದ್ದಿದ್ದು ಅದರ ಅವಶೇಷಗಳನ್ನು, ಕಲ್ಲುಗಳನ್ನೂ ಬದಿಗಿಟ್ಟು ಸ್ಥಳ ಅಚ್ಚುಕಟ್ಟಾಗಿಡಲು ಸಹಕರಿಸಿದರು. ಕಲ್ಲುಗುಂಡಿ ಬಾಲಂಬಿ ಸೇತುವೆಯಲ್ಲಿ ಸಿಲುಕಿದ್ದ ಭಾರೀ ಗಾತ್ರದ ಮರ ಮತ್ತು ಬಿದಿರುಗಳನ್ನು ತೆರವುಗೊಳಿಸಲು  ಕಾರ್ಯಾಚರಣೆ ನಡೆಸಿ ಕ್ರೈನ್ ಮುಖಾಂತರ ಬೃಹದಾಕಾರದ ಮರದ ದಿಮ್ಮಿಗಳನ್ನು ಮೇಲಕ್ಕೆತ್ತಿದರು. ನೀರಿನಲ್ಲಿ ಬಂದ ಬಿದಿರುಗಳ ಸಹಿತವಿರುವ ಬಲ್ಲೆಗಳು ಸೇತುವೆಯ ನೀರು ಹೋಗುವ ದ್ವಾರವನ್ನು ಮುಚ್ಚಿದನ್ನು ಗಮನಿಸಿದ ಕಾರ್ಯಕರ್ತರು ಅವುಗಳನ್ನು ತೆರವುಗೊಳಿಸಿ ಶುಚೀಕರಿಸಿದರು.

ಕಲ್ಲುಗುಂಡಿಯಲ್ಲಿ ಸತತವಾಗಿ ಎಸ್ಸೆಸ್ಸಫ್ ಹಾಗೂ ಎಸ್ ವೈ ಎಸ್ ತುರ್ತು ಸೇವಾ ತಂಡದ ಕಾರ್ಯಕರ್ತರು ಸೇವಾ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದಾರೆ. ಈ ಕಾರ್ಯಾಚರಣೆಗೆ ಪಂಚಾಯತ್ ಅಧ್ಯಕ್ಷ ಜಿ.ಕೆ ಹಮೀದ್ ಸಹಿತ ಜನಪ್ರತಿನಿಧಿಗಳು ಸಾಥ್ ಕೊಟ್ಟಿದ್ದರು. ಸಾರ್ವಜನಿಕರು ಕಾರ್ಯಕರ್ತರ ಶ್ರಮದಾನವನ್ನು ಅಭಿನಂದಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

12 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

19 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

20 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

20 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago