Advertisement
ಸುದ್ದಿಗಳು

#ಸೇವೆ | ಪ್ರವಾಹ ಪೀಡಿತ ಪ್ರದೇಶದಲ್ಲಿ ದಣಿವರಿಯದ ಸೇವೆಯಲ್ಲಿ SSF ಯುವ ಸೇವಾ ತಂಡ |

Share

ಕಳೆದ ಹಲವು ದಿನಗಳಿಂದ ಸಂಪಾಜೆ, ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಪ್ರದೇಶದ ಜನರ ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮತ್ತು ಸಹಾಯಕ್ಕೆ ನಿರಂತರವಾಗಿ ದಣಿವರಿಯದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ನಿರಂತರ ಸೇವಾ ಕಾರ್ಯ ಮಾಡುತ್ತಿದೆ.

ತೀವ್ರ ಮಳೆಯ ಪರಿಣಾಮ ಕಲ್ಲುಗುಂಡಿ ಮಸೀದಿ ತಡೆಗೋಡೆ ಕಳಚಿ ಬಿದ್ದಿದ್ದು ಅದರ ಅವಶೇಷಗಳನ್ನು, ಕಲ್ಲುಗಳನ್ನೂ ಬದಿಗಿಟ್ಟು ಸ್ಥಳ ಅಚ್ಚುಕಟ್ಟಾಗಿಡಲು ಸಹಕರಿಸಿದರು. ಕಲ್ಲುಗುಂಡಿ ಬಾಲಂಬಿ ಸೇತುವೆಯಲ್ಲಿ ಸಿಲುಕಿದ್ದ ಭಾರೀ ಗಾತ್ರದ ಮರ ಮತ್ತು ಬಿದಿರುಗಳನ್ನು ತೆರವುಗೊಳಿಸಲು  ಕಾರ್ಯಾಚರಣೆ ನಡೆಸಿ ಕ್ರೈನ್ ಮುಖಾಂತರ ಬೃಹದಾಕಾರದ ಮರದ ದಿಮ್ಮಿಗಳನ್ನು ಮೇಲಕ್ಕೆತ್ತಿದರು. ನೀರಿನಲ್ಲಿ ಬಂದ ಬಿದಿರುಗಳ ಸಹಿತವಿರುವ ಬಲ್ಲೆಗಳು ಸೇತುವೆಯ ನೀರು ಹೋಗುವ ದ್ವಾರವನ್ನು ಮುಚ್ಚಿದನ್ನು ಗಮನಿಸಿದ ಕಾರ್ಯಕರ್ತರು ಅವುಗಳನ್ನು ತೆರವುಗೊಳಿಸಿ ಶುಚೀಕರಿಸಿದರು.

ಕಲ್ಲುಗುಂಡಿಯಲ್ಲಿ ಸತತವಾಗಿ ಎಸ್ಸೆಸ್ಸಫ್ ಹಾಗೂ ಎಸ್ ವೈ ಎಸ್ ತುರ್ತು ಸೇವಾ ತಂಡದ ಕಾರ್ಯಕರ್ತರು ಸೇವಾ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದಾರೆ. ಈ ಕಾರ್ಯಾಚರಣೆಗೆ ಪಂಚಾಯತ್ ಅಧ್ಯಕ್ಷ ಜಿ.ಕೆ ಹಮೀದ್ ಸಹಿತ ಜನಪ್ರತಿನಿಧಿಗಳು ಸಾಥ್ ಕೊಟ್ಟಿದ್ದರು. ಸಾರ್ವಜನಿಕರು ಕಾರ್ಯಕರ್ತರ ಶ್ರಮದಾನವನ್ನು ಅಭಿನಂದಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago