Advertisement
ಸುದ್ದಿಗಳು

#ಸೇವೆ | ಪ್ರವಾಹ ಪೀಡಿತ ಪ್ರದೇಶದಲ್ಲಿ ದಣಿವರಿಯದ ಸೇವೆಯಲ್ಲಿ SSF ಯುವ ಸೇವಾ ತಂಡ |

Share

ಕಳೆದ ಹಲವು ದಿನಗಳಿಂದ ಸಂಪಾಜೆ, ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಪ್ರದೇಶದ ಜನರ ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮತ್ತು ಸಹಾಯಕ್ಕೆ ನಿರಂತರವಾಗಿ ದಣಿವರಿಯದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ನಿರಂತರ ಸೇವಾ ಕಾರ್ಯ ಮಾಡುತ್ತಿದೆ.

ತೀವ್ರ ಮಳೆಯ ಪರಿಣಾಮ ಕಲ್ಲುಗುಂಡಿ ಮಸೀದಿ ತಡೆಗೋಡೆ ಕಳಚಿ ಬಿದ್ದಿದ್ದು ಅದರ ಅವಶೇಷಗಳನ್ನು, ಕಲ್ಲುಗಳನ್ನೂ ಬದಿಗಿಟ್ಟು ಸ್ಥಳ ಅಚ್ಚುಕಟ್ಟಾಗಿಡಲು ಸಹಕರಿಸಿದರು. ಕಲ್ಲುಗುಂಡಿ ಬಾಲಂಬಿ ಸೇತುವೆಯಲ್ಲಿ ಸಿಲುಕಿದ್ದ ಭಾರೀ ಗಾತ್ರದ ಮರ ಮತ್ತು ಬಿದಿರುಗಳನ್ನು ತೆರವುಗೊಳಿಸಲು  ಕಾರ್ಯಾಚರಣೆ ನಡೆಸಿ ಕ್ರೈನ್ ಮುಖಾಂತರ ಬೃಹದಾಕಾರದ ಮರದ ದಿಮ್ಮಿಗಳನ್ನು ಮೇಲಕ್ಕೆತ್ತಿದರು. ನೀರಿನಲ್ಲಿ ಬಂದ ಬಿದಿರುಗಳ ಸಹಿತವಿರುವ ಬಲ್ಲೆಗಳು ಸೇತುವೆಯ ನೀರು ಹೋಗುವ ದ್ವಾರವನ್ನು ಮುಚ್ಚಿದನ್ನು ಗಮನಿಸಿದ ಕಾರ್ಯಕರ್ತರು ಅವುಗಳನ್ನು ತೆರವುಗೊಳಿಸಿ ಶುಚೀಕರಿಸಿದರು.

ಕಲ್ಲುಗುಂಡಿಯಲ್ಲಿ ಸತತವಾಗಿ ಎಸ್ಸೆಸ್ಸಫ್ ಹಾಗೂ ಎಸ್ ವೈ ಎಸ್ ತುರ್ತು ಸೇವಾ ತಂಡದ ಕಾರ್ಯಕರ್ತರು ಸೇವಾ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದಾರೆ. ಈ ಕಾರ್ಯಾಚರಣೆಗೆ ಪಂಚಾಯತ್ ಅಧ್ಯಕ್ಷ ಜಿ.ಕೆ ಹಮೀದ್ ಸಹಿತ ಜನಪ್ರತಿನಿಧಿಗಳು ಸಾಥ್ ಕೊಟ್ಟಿದ್ದರು. ಸಾರ್ವಜನಿಕರು ಕಾರ್ಯಕರ್ತರ ಶ್ರಮದಾನವನ್ನು ಅಭಿನಂದಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago