ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್ ಸೇವೆಗಳನ್ನು ತಲುಪಿಸುವ ಸಿಎಸ್ಸಿ ಮೊಬೈಲ್ ವಾಹನ ಪ್ರಾರಂಭಿಸಿದೆ. ಈ ಸೇವಾ ಕೇಂದ್ರಕ್ಕೆ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತುಮಕೂರಿನಲ್ಲಿ ಚಾಲನೆ ನೀಡಿದರು.
ಈ ಮೊಬೈಲ್ ವ್ಯಾನ್ ಜಿಲ್ಲೆಯ ಜನರಿಗೆ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸೇವೆಗಳನ್ನು ಒದಗಿಸುತ್ತದೆ. ಬ್ಯಾಂಕಿಂಗ್, ವಿಮೆ, ಡಿಜಿಪೇ, ಮೇಕೋ ಎಟಿಎಂ, ಆಯುಷ್ಮಾನ್ ಭಾರತ್, ಇ ಶ್ರಮ್, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಇ.ಕೆ ವೈ ಸಿ ಮತ್ತು ಇತರ ಸೇವೆಗಳು ಸೇರಿದಂತೆ ಜನರಿಗೆ ವಿವಿಧ ಆನ್ ಲೈನ್ ಸೇವೆಗಳನ್ನು ಒದಗಿಸುತ್ತದೆ.
ಬಳಿಕ ಮಾತನಾಡಿದ ಸಚಿವ ವಿ ಸೋಮಣ್ಣ, ಗ್ರಾಮೀಣ ಭಾಗದ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನದ ಸೇವೆಗಳನ್ನು ತಲುಪಿಸುವುದು ಗುರಿಯಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel