ಸುದ್ದಿಗಳು

ಕುಕ್ಕೆಯಲ್ಲಿ ವಿಶೇಷ ಸೇವೆ | ಮೂರು ದಿನಗಳಲ್ಲಿ 489 ಮಂದಿ ಎಡೆಸ್ನಾನ | 141 ಭಕ್ತರಿಂದ ಬ್ರಹ್ಮರಥ ಸೇವೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನಾಡಿನೆಲ್ಲೆಡೆ ನಾಗದೋಷ ನಿವಾರಣೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಈ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಾತ್ರಾ ನಡೆಯುವ ವಿಶೇಷ ಸೇವೆಗಳಾದ ಎಡೆಸ್ನಾನ ಹಾಗೂ ಬ್ರಹ್ಮರಥೋತ್ಸವ  ಸೇವೆ ಹಾಗೂ ಬೀದಿ ಮಡೆಸ್ನಾನ ಗಮನ ಸೆಳೆಯುತ್ತದೆ. ಈ ಬಾರಿ ಮೂರು ದಿನಗಳಲ್ಲಿ 489 ಮಂದಿ ಭಕ್ತರಿಂದ ಎಡೆಸ್ನಾನ ಹಾಗೂ 141 ಮಂದಿ ಭಕ್ತರಿಂದ ಬ್ರಹ್ಮರಥ ಸೇವೆ ನಡೆಯಿತು.

Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹಲವಾರು ವರ್ಷಗಳಿಂದ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಡೆಸ್ನಾನ ನಡೆಯುತ್ತಿತ್ತು. ಸಂಪ್ರದಾಯಗಳ , ಆಚರಣೆಗಳಲ್ಲಿ ಸಹಜ ಬದಲಾವಣೆಯ ಬಳಿಕ ಎಡೆಸ್ನಾನವು ಜಾರಿಗೆ ಬಂದಿತ್ತು. ದೇವರ ಅನ್ನ ಪ್ರಸಾದವನ್ನು ದೇವಸ್ಥಾನದ ಹೊರಾಂಗಣದಲ್ಲಿ ಇರಿಸಿ ಗೋವುಗಳಿಂದ ಈ ಪ್ರಸಾದವನ್ನು ತಿನ್ನಿಸಿದ ಬಳಿಕ ಭಕ್ತಾದಿಗಳು ಉರುಳುಸೇವೆ ನಡೆಸುತ್ತಾರೆ. ಚಂಪಾಷಷ್ಠಿ ಮಹೋತ್ಸವದ ಮೂರು ದಿನಗಳ ಕಾಲ ಈ ಸೇವೆ ನಡೆಯುತ್ತದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಈ ಸೇವೆ ಸ್ಥಗಿತವಾಗಿತ್ತು. ಈ ಬಾರಿ ಮತ್ತೆ ಆರಂಭಗೊಂಡ ಸೇವೆಯಲ್ಲಿ  ಒಟ್ಟು ಮೂರು ದಿನಗಳ ಕಾಲ 489 ಮಂದಿ ಭಕ್ತರು ಸೇವೆ ನಡಸಿದರು.  ಷಷ್ಠಿ ದಿನವಾದ ಮಂಗಳವಾರ 210 ಮಂದಿ ಎಡೆಸ್ನಾನ ಸೇವೆ ನೆರವೇರಿಸಿದರು.

ಮಂಗಳವಾರ ಬೆಳಗ್ಗೆ 7.05ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನೆರವೇರಿ, ಬ್ರಹ್ಮರಥೋತ್ಸವ ಜರುಗಿತು.141 ಮಂದಿ ಭಕ್ತರು ಬ್ರಹ್ಮರಥ ಸೇವೆ ನೆರವೇರಿಸಿದರು. ಬ್ರಹ್ಮರಥ ಹರಕೆ ಸೇವೆ ಸಲ್ಲಿಸಿದವರಿಗೆ  ಮಹಾಪ್ರಸಾದ ವಿತರಣೆಯಾಗುತ್ತದೆ.

ಲಕ್ಷದೀಪೋತ್ಸವ ಬಳಿಕ ಬೀದಿ ಮಡೆಸ್ನಾನ ನಡೆಯುತ್ತದೆ. ಕುಮಾರಧಾರ ತೀರ್ಥ ಸ್ನಾನದಿಂದ ದೇವಳದ ತನಕ ಸುಮಾರು 2ಕಿ.ಮೀ ದೂರದವರೆಗೆ ಉರುಳುತ್ತಾ ಸಾಗುವ ಅತ್ಯಂತ ಕಠಿಣವಾದ ಹರಕೆ ಸೇವೆ ಬೀದಿಯ ಉರುಳು ಸೇವೆ. ಈ ಸೇವೆ ಕೂಡಾ ಬ್ರಹ್ಮರಥೋತ್ಸವದ ಬಳಿಕ ಕೊನೆಗೊಳ್ಳುತ್ತದೆ. ನೂರಾರು ಮಂದಿ ಈ ಸೇವೆಯಲ್ಲಿ  ತೊಡಗಿಸಿಕೊಳ್ಳುತ್ತಾರೆ.

ಪ್ರತಿಕ್ರಿಯೆ :

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

8 minutes ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

11 minutes ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

20 minutes ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

37 minutes ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

41 minutes ago

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

7 hours ago