Advertisement
ಸುದ್ದಿಗಳು

ಕುಕ್ಕೆಯಲ್ಲಿ ವಿಶೇಷ ಸೇವೆ | ಮೂರು ದಿನಗಳಲ್ಲಿ 489 ಮಂದಿ ಎಡೆಸ್ನಾನ | 141 ಭಕ್ತರಿಂದ ಬ್ರಹ್ಮರಥ ಸೇವೆ |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನಾಡಿನೆಲ್ಲೆಡೆ ನಾಗದೋಷ ನಿವಾರಣೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಈ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಾತ್ರಾ ನಡೆಯುವ ವಿಶೇಷ ಸೇವೆಗಳಾದ ಎಡೆಸ್ನಾನ ಹಾಗೂ ಬ್ರಹ್ಮರಥೋತ್ಸವ  ಸೇವೆ ಹಾಗೂ ಬೀದಿ ಮಡೆಸ್ನಾನ ಗಮನ ಸೆಳೆಯುತ್ತದೆ. ಈ ಬಾರಿ ಮೂರು ದಿನಗಳಲ್ಲಿ 489 ಮಂದಿ ಭಕ್ತರಿಂದ ಎಡೆಸ್ನಾನ ಹಾಗೂ 141 ಮಂದಿ ಭಕ್ತರಿಂದ ಬ್ರಹ್ಮರಥ ಸೇವೆ ನಡೆಯಿತು.

Advertisement
Advertisement
Advertisement
Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹಲವಾರು ವರ್ಷಗಳಿಂದ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಡೆಸ್ನಾನ ನಡೆಯುತ್ತಿತ್ತು. ಸಂಪ್ರದಾಯಗಳ , ಆಚರಣೆಗಳಲ್ಲಿ ಸಹಜ ಬದಲಾವಣೆಯ ಬಳಿಕ ಎಡೆಸ್ನಾನವು ಜಾರಿಗೆ ಬಂದಿತ್ತು. ದೇವರ ಅನ್ನ ಪ್ರಸಾದವನ್ನು ದೇವಸ್ಥಾನದ ಹೊರಾಂಗಣದಲ್ಲಿ ಇರಿಸಿ ಗೋವುಗಳಿಂದ ಈ ಪ್ರಸಾದವನ್ನು ತಿನ್ನಿಸಿದ ಬಳಿಕ ಭಕ್ತಾದಿಗಳು ಉರುಳುಸೇವೆ ನಡೆಸುತ್ತಾರೆ. ಚಂಪಾಷಷ್ಠಿ ಮಹೋತ್ಸವದ ಮೂರು ದಿನಗಳ ಕಾಲ ಈ ಸೇವೆ ನಡೆಯುತ್ತದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಈ ಸೇವೆ ಸ್ಥಗಿತವಾಗಿತ್ತು. ಈ ಬಾರಿ ಮತ್ತೆ ಆರಂಭಗೊಂಡ ಸೇವೆಯಲ್ಲಿ  ಒಟ್ಟು ಮೂರು ದಿನಗಳ ಕಾಲ 489 ಮಂದಿ ಭಕ್ತರು ಸೇವೆ ನಡಸಿದರು.  ಷಷ್ಠಿ ದಿನವಾದ ಮಂಗಳವಾರ 210 ಮಂದಿ ಎಡೆಸ್ನಾನ ಸೇವೆ ನೆರವೇರಿಸಿದರು.

Advertisement

ಮಂಗಳವಾರ ಬೆಳಗ್ಗೆ 7.05ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನೆರವೇರಿ, ಬ್ರಹ್ಮರಥೋತ್ಸವ ಜರುಗಿತು.141 ಮಂದಿ ಭಕ್ತರು ಬ್ರಹ್ಮರಥ ಸೇವೆ ನೆರವೇರಿಸಿದರು. ಬ್ರಹ್ಮರಥ ಹರಕೆ ಸೇವೆ ಸಲ್ಲಿಸಿದವರಿಗೆ  ಮಹಾಪ್ರಸಾದ ವಿತರಣೆಯಾಗುತ್ತದೆ.

ಲಕ್ಷದೀಪೋತ್ಸವ ಬಳಿಕ ಬೀದಿ ಮಡೆಸ್ನಾನ ನಡೆಯುತ್ತದೆ. ಕುಮಾರಧಾರ ತೀರ್ಥ ಸ್ನಾನದಿಂದ ದೇವಳದ ತನಕ ಸುಮಾರು 2ಕಿ.ಮೀ ದೂರದವರೆಗೆ ಉರುಳುತ್ತಾ ಸಾಗುವ ಅತ್ಯಂತ ಕಠಿಣವಾದ ಹರಕೆ ಸೇವೆ ಬೀದಿಯ ಉರುಳು ಸೇವೆ. ಈ ಸೇವೆ ಕೂಡಾ ಬ್ರಹ್ಮರಥೋತ್ಸವದ ಬಳಿಕ ಕೊನೆಗೊಳ್ಳುತ್ತದೆ. ನೂರಾರು ಮಂದಿ ಈ ಸೇವೆಯಲ್ಲಿ  ತೊಡಗಿಸಿಕೊಳ್ಳುತ್ತಾರೆ.

Advertisement
ಪ್ರತಿಕ್ರಿಯೆ :

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

24 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago