Advertisement
ಸುದ್ದಿಗಳು

ಕುಕ್ಕೆಯಲ್ಲಿ ವಿಶೇಷ ಸೇವೆ | ಮೂರು ದಿನಗಳಲ್ಲಿ 489 ಮಂದಿ ಎಡೆಸ್ನಾನ | 141 ಭಕ್ತರಿಂದ ಬ್ರಹ್ಮರಥ ಸೇವೆ |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನಾಡಿನೆಲ್ಲೆಡೆ ನಾಗದೋಷ ನಿವಾರಣೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಈ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಾತ್ರಾ ನಡೆಯುವ ವಿಶೇಷ ಸೇವೆಗಳಾದ ಎಡೆಸ್ನಾನ ಹಾಗೂ ಬ್ರಹ್ಮರಥೋತ್ಸವ  ಸೇವೆ ಹಾಗೂ ಬೀದಿ ಮಡೆಸ್ನಾನ ಗಮನ ಸೆಳೆಯುತ್ತದೆ. ಈ ಬಾರಿ ಮೂರು ದಿನಗಳಲ್ಲಿ 489 ಮಂದಿ ಭಕ್ತರಿಂದ ಎಡೆಸ್ನಾನ ಹಾಗೂ 141 ಮಂದಿ ಭಕ್ತರಿಂದ ಬ್ರಹ್ಮರಥ ಸೇವೆ ನಡೆಯಿತು.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹಲವಾರು ವರ್ಷಗಳಿಂದ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಡೆಸ್ನಾನ ನಡೆಯುತ್ತಿತ್ತು. ಸಂಪ್ರದಾಯಗಳ , ಆಚರಣೆಗಳಲ್ಲಿ ಸಹಜ ಬದಲಾವಣೆಯ ಬಳಿಕ ಎಡೆಸ್ನಾನವು ಜಾರಿಗೆ ಬಂದಿತ್ತು. ದೇವರ ಅನ್ನ ಪ್ರಸಾದವನ್ನು ದೇವಸ್ಥಾನದ ಹೊರಾಂಗಣದಲ್ಲಿ ಇರಿಸಿ ಗೋವುಗಳಿಂದ ಈ ಪ್ರಸಾದವನ್ನು ತಿನ್ನಿಸಿದ ಬಳಿಕ ಭಕ್ತಾದಿಗಳು ಉರುಳುಸೇವೆ ನಡೆಸುತ್ತಾರೆ. ಚಂಪಾಷಷ್ಠಿ ಮಹೋತ್ಸವದ ಮೂರು ದಿನಗಳ ಕಾಲ ಈ ಸೇವೆ ನಡೆಯುತ್ತದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಈ ಸೇವೆ ಸ್ಥಗಿತವಾಗಿತ್ತು. ಈ ಬಾರಿ ಮತ್ತೆ ಆರಂಭಗೊಂಡ ಸೇವೆಯಲ್ಲಿ  ಒಟ್ಟು ಮೂರು ದಿನಗಳ ಕಾಲ 489 ಮಂದಿ ಭಕ್ತರು ಸೇವೆ ನಡಸಿದರು.  ಷಷ್ಠಿ ದಿನವಾದ ಮಂಗಳವಾರ 210 ಮಂದಿ ಎಡೆಸ್ನಾನ ಸೇವೆ ನೆರವೇರಿಸಿದರು.

ಮಂಗಳವಾರ ಬೆಳಗ್ಗೆ 7.05ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನೆರವೇರಿ, ಬ್ರಹ್ಮರಥೋತ್ಸವ ಜರುಗಿತು.141 ಮಂದಿ ಭಕ್ತರು ಬ್ರಹ್ಮರಥ ಸೇವೆ ನೆರವೇರಿಸಿದರು. ಬ್ರಹ್ಮರಥ ಹರಕೆ ಸೇವೆ ಸಲ್ಲಿಸಿದವರಿಗೆ  ಮಹಾಪ್ರಸಾದ ವಿತರಣೆಯಾಗುತ್ತದೆ.

ಲಕ್ಷದೀಪೋತ್ಸವ ಬಳಿಕ ಬೀದಿ ಮಡೆಸ್ನಾನ ನಡೆಯುತ್ತದೆ. ಕುಮಾರಧಾರ ತೀರ್ಥ ಸ್ನಾನದಿಂದ ದೇವಳದ ತನಕ ಸುಮಾರು 2ಕಿ.ಮೀ ದೂರದವರೆಗೆ ಉರುಳುತ್ತಾ ಸಾಗುವ ಅತ್ಯಂತ ಕಠಿಣವಾದ ಹರಕೆ ಸೇವೆ ಬೀದಿಯ ಉರುಳು ಸೇವೆ. ಈ ಸೇವೆ ಕೂಡಾ ಬ್ರಹ್ಮರಥೋತ್ಸವದ ಬಳಿಕ ಕೊನೆಗೊಳ್ಳುತ್ತದೆ. ನೂರಾರು ಮಂದಿ ಈ ಸೇವೆಯಲ್ಲಿ  ತೊಡಗಿಸಿಕೊಳ್ಳುತ್ತಾರೆ.

ಪ್ರತಿಕ್ರಿಯೆ :

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

3 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

3 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago