Advertisement
ಸುದ್ದಿಗಳು

ಕುಕ್ಕೆಯಲ್ಲಿ ವಿಶೇಷ ಸೇವೆ | ಮೂರು ದಿನಗಳಲ್ಲಿ 489 ಮಂದಿ ಎಡೆಸ್ನಾನ | 141 ಭಕ್ತರಿಂದ ಬ್ರಹ್ಮರಥ ಸೇವೆ |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನಾಡಿನೆಲ್ಲೆಡೆ ನಾಗದೋಷ ನಿವಾರಣೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಈ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಾತ್ರಾ ನಡೆಯುವ ವಿಶೇಷ ಸೇವೆಗಳಾದ ಎಡೆಸ್ನಾನ ಹಾಗೂ ಬ್ರಹ್ಮರಥೋತ್ಸವ  ಸೇವೆ ಹಾಗೂ ಬೀದಿ ಮಡೆಸ್ನಾನ ಗಮನ ಸೆಳೆಯುತ್ತದೆ. ಈ ಬಾರಿ ಮೂರು ದಿನಗಳಲ್ಲಿ 489 ಮಂದಿ ಭಕ್ತರಿಂದ ಎಡೆಸ್ನಾನ ಹಾಗೂ 141 ಮಂದಿ ಭಕ್ತರಿಂದ ಬ್ರಹ್ಮರಥ ಸೇವೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹಲವಾರು ವರ್ಷಗಳಿಂದ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಡೆಸ್ನಾನ ನಡೆಯುತ್ತಿತ್ತು. ಸಂಪ್ರದಾಯಗಳ , ಆಚರಣೆಗಳಲ್ಲಿ ಸಹಜ ಬದಲಾವಣೆಯ ಬಳಿಕ ಎಡೆಸ್ನಾನವು ಜಾರಿಗೆ ಬಂದಿತ್ತು. ದೇವರ ಅನ್ನ ಪ್ರಸಾದವನ್ನು ದೇವಸ್ಥಾನದ ಹೊರಾಂಗಣದಲ್ಲಿ ಇರಿಸಿ ಗೋವುಗಳಿಂದ ಈ ಪ್ರಸಾದವನ್ನು ತಿನ್ನಿಸಿದ ಬಳಿಕ ಭಕ್ತಾದಿಗಳು ಉರುಳುಸೇವೆ ನಡೆಸುತ್ತಾರೆ. ಚಂಪಾಷಷ್ಠಿ ಮಹೋತ್ಸವದ ಮೂರು ದಿನಗಳ ಕಾಲ ಈ ಸೇವೆ ನಡೆಯುತ್ತದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಈ ಸೇವೆ ಸ್ಥಗಿತವಾಗಿತ್ತು. ಈ ಬಾರಿ ಮತ್ತೆ ಆರಂಭಗೊಂಡ ಸೇವೆಯಲ್ಲಿ  ಒಟ್ಟು ಮೂರು ದಿನಗಳ ಕಾಲ 489 ಮಂದಿ ಭಕ್ತರು ಸೇವೆ ನಡಸಿದರು.  ಷಷ್ಠಿ ದಿನವಾದ ಮಂಗಳವಾರ 210 ಮಂದಿ ಎಡೆಸ್ನಾನ ಸೇವೆ ನೆರವೇರಿಸಿದರು.

ಮಂಗಳವಾರ ಬೆಳಗ್ಗೆ 7.05ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನೆರವೇರಿ, ಬ್ರಹ್ಮರಥೋತ್ಸವ ಜರುಗಿತು.141 ಮಂದಿ ಭಕ್ತರು ಬ್ರಹ್ಮರಥ ಸೇವೆ ನೆರವೇರಿಸಿದರು. ಬ್ರಹ್ಮರಥ ಹರಕೆ ಸೇವೆ ಸಲ್ಲಿಸಿದವರಿಗೆ  ಮಹಾಪ್ರಸಾದ ವಿತರಣೆಯಾಗುತ್ತದೆ.

ಲಕ್ಷದೀಪೋತ್ಸವ ಬಳಿಕ ಬೀದಿ ಮಡೆಸ್ನಾನ ನಡೆಯುತ್ತದೆ. ಕುಮಾರಧಾರ ತೀರ್ಥ ಸ್ನಾನದಿಂದ ದೇವಳದ ತನಕ ಸುಮಾರು 2ಕಿ.ಮೀ ದೂರದವರೆಗೆ ಉರುಳುತ್ತಾ ಸಾಗುವ ಅತ್ಯಂತ ಕಠಿಣವಾದ ಹರಕೆ ಸೇವೆ ಬೀದಿಯ ಉರುಳು ಸೇವೆ. ಈ ಸೇವೆ ಕೂಡಾ ಬ್ರಹ್ಮರಥೋತ್ಸವದ ಬಳಿಕ ಕೊನೆಗೊಳ್ಳುತ್ತದೆ. ನೂರಾರು ಮಂದಿ ಈ ಸೇವೆಯಲ್ಲಿ  ತೊಡಗಿಸಿಕೊಳ್ಳುತ್ತಾರೆ.

ಪ್ರತಿಕ್ರಿಯೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

21 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

22 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago