Advertisement
ಸುದ್ದಿಗಳು

ಕುಕ್ಕೆಯಲ್ಲಿ ವಿಶೇಷ ಸೇವೆ | ಮೂರು ದಿನಗಳಲ್ಲಿ 489 ಮಂದಿ ಎಡೆಸ್ನಾನ | 141 ಭಕ್ತರಿಂದ ಬ್ರಹ್ಮರಥ ಸೇವೆ |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನಾಡಿನೆಲ್ಲೆಡೆ ನಾಗದೋಷ ನಿವಾರಣೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಈ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಾತ್ರಾ ನಡೆಯುವ ವಿಶೇಷ ಸೇವೆಗಳಾದ ಎಡೆಸ್ನಾನ ಹಾಗೂ ಬ್ರಹ್ಮರಥೋತ್ಸವ  ಸೇವೆ ಹಾಗೂ ಬೀದಿ ಮಡೆಸ್ನಾನ ಗಮನ ಸೆಳೆಯುತ್ತದೆ. ಈ ಬಾರಿ ಮೂರು ದಿನಗಳಲ್ಲಿ 489 ಮಂದಿ ಭಕ್ತರಿಂದ ಎಡೆಸ್ನಾನ ಹಾಗೂ 141 ಮಂದಿ ಭಕ್ತರಿಂದ ಬ್ರಹ್ಮರಥ ಸೇವೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹಲವಾರು ವರ್ಷಗಳಿಂದ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಡೆಸ್ನಾನ ನಡೆಯುತ್ತಿತ್ತು. ಸಂಪ್ರದಾಯಗಳ , ಆಚರಣೆಗಳಲ್ಲಿ ಸಹಜ ಬದಲಾವಣೆಯ ಬಳಿಕ ಎಡೆಸ್ನಾನವು ಜಾರಿಗೆ ಬಂದಿತ್ತು. ದೇವರ ಅನ್ನ ಪ್ರಸಾದವನ್ನು ದೇವಸ್ಥಾನದ ಹೊರಾಂಗಣದಲ್ಲಿ ಇರಿಸಿ ಗೋವುಗಳಿಂದ ಈ ಪ್ರಸಾದವನ್ನು ತಿನ್ನಿಸಿದ ಬಳಿಕ ಭಕ್ತಾದಿಗಳು ಉರುಳುಸೇವೆ ನಡೆಸುತ್ತಾರೆ. ಚಂಪಾಷಷ್ಠಿ ಮಹೋತ್ಸವದ ಮೂರು ದಿನಗಳ ಕಾಲ ಈ ಸೇವೆ ನಡೆಯುತ್ತದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಈ ಸೇವೆ ಸ್ಥಗಿತವಾಗಿತ್ತು. ಈ ಬಾರಿ ಮತ್ತೆ ಆರಂಭಗೊಂಡ ಸೇವೆಯಲ್ಲಿ  ಒಟ್ಟು ಮೂರು ದಿನಗಳ ಕಾಲ 489 ಮಂದಿ ಭಕ್ತರು ಸೇವೆ ನಡಸಿದರು.  ಷಷ್ಠಿ ದಿನವಾದ ಮಂಗಳವಾರ 210 ಮಂದಿ ಎಡೆಸ್ನಾನ ಸೇವೆ ನೆರವೇರಿಸಿದರು.

ಮಂಗಳವಾರ ಬೆಳಗ್ಗೆ 7.05ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನೆರವೇರಿ, ಬ್ರಹ್ಮರಥೋತ್ಸವ ಜರುಗಿತು.141 ಮಂದಿ ಭಕ್ತರು ಬ್ರಹ್ಮರಥ ಸೇವೆ ನೆರವೇರಿಸಿದರು. ಬ್ರಹ್ಮರಥ ಹರಕೆ ಸೇವೆ ಸಲ್ಲಿಸಿದವರಿಗೆ  ಮಹಾಪ್ರಸಾದ ವಿತರಣೆಯಾಗುತ್ತದೆ.

ಲಕ್ಷದೀಪೋತ್ಸವ ಬಳಿಕ ಬೀದಿ ಮಡೆಸ್ನಾನ ನಡೆಯುತ್ತದೆ. ಕುಮಾರಧಾರ ತೀರ್ಥ ಸ್ನಾನದಿಂದ ದೇವಳದ ತನಕ ಸುಮಾರು 2ಕಿ.ಮೀ ದೂರದವರೆಗೆ ಉರುಳುತ್ತಾ ಸಾಗುವ ಅತ್ಯಂತ ಕಠಿಣವಾದ ಹರಕೆ ಸೇವೆ ಬೀದಿಯ ಉರುಳು ಸೇವೆ. ಈ ಸೇವೆ ಕೂಡಾ ಬ್ರಹ್ಮರಥೋತ್ಸವದ ಬಳಿಕ ಕೊನೆಗೊಳ್ಳುತ್ತದೆ. ನೂರಾರು ಮಂದಿ ಈ ಸೇವೆಯಲ್ಲಿ  ತೊಡಗಿಸಿಕೊಳ್ಳುತ್ತಾರೆ.

ಪ್ರತಿಕ್ರಿಯೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

11 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

12 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago