Advertisement
ಸುದ್ದಿಗಳು

ಕುಕ್ಕೆಯಲ್ಲಿ ವಿಶೇಷ ಸೇವೆ | ಮೂರು ದಿನಗಳಲ್ಲಿ 489 ಮಂದಿ ಎಡೆಸ್ನಾನ | 141 ಭಕ್ತರಿಂದ ಬ್ರಹ್ಮರಥ ಸೇವೆ |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನಾಡಿನೆಲ್ಲೆಡೆ ನಾಗದೋಷ ನಿವಾರಣೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಈ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಾತ್ರಾ ನಡೆಯುವ ವಿಶೇಷ ಸೇವೆಗಳಾದ ಎಡೆಸ್ನಾನ ಹಾಗೂ ಬ್ರಹ್ಮರಥೋತ್ಸವ  ಸೇವೆ ಹಾಗೂ ಬೀದಿ ಮಡೆಸ್ನಾನ ಗಮನ ಸೆಳೆಯುತ್ತದೆ. ಈ ಬಾರಿ ಮೂರು ದಿನಗಳಲ್ಲಿ 489 ಮಂದಿ ಭಕ್ತರಿಂದ ಎಡೆಸ್ನಾನ ಹಾಗೂ 141 ಮಂದಿ ಭಕ್ತರಿಂದ ಬ್ರಹ್ಮರಥ ಸೇವೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹಲವಾರು ವರ್ಷಗಳಿಂದ ವಾರ್ಷಿಕ ಜಾತ್ರಾ ಉತ್ಸವದ ಸಂದರ್ಭ ಮಡೆಸ್ನಾನ ನಡೆಯುತ್ತಿತ್ತು. ಸಂಪ್ರದಾಯಗಳ , ಆಚರಣೆಗಳಲ್ಲಿ ಸಹಜ ಬದಲಾವಣೆಯ ಬಳಿಕ ಎಡೆಸ್ನಾನವು ಜಾರಿಗೆ ಬಂದಿತ್ತು. ದೇವರ ಅನ್ನ ಪ್ರಸಾದವನ್ನು ದೇವಸ್ಥಾನದ ಹೊರಾಂಗಣದಲ್ಲಿ ಇರಿಸಿ ಗೋವುಗಳಿಂದ ಈ ಪ್ರಸಾದವನ್ನು ತಿನ್ನಿಸಿದ ಬಳಿಕ ಭಕ್ತಾದಿಗಳು ಉರುಳುಸೇವೆ ನಡೆಸುತ್ತಾರೆ. ಚಂಪಾಷಷ್ಠಿ ಮಹೋತ್ಸವದ ಮೂರು ದಿನಗಳ ಕಾಲ ಈ ಸೇವೆ ನಡೆಯುತ್ತದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಈ ಸೇವೆ ಸ್ಥಗಿತವಾಗಿತ್ತು. ಈ ಬಾರಿ ಮತ್ತೆ ಆರಂಭಗೊಂಡ ಸೇವೆಯಲ್ಲಿ  ಒಟ್ಟು ಮೂರು ದಿನಗಳ ಕಾಲ 489 ಮಂದಿ ಭಕ್ತರು ಸೇವೆ ನಡಸಿದರು.  ಷಷ್ಠಿ ದಿನವಾದ ಮಂಗಳವಾರ 210 ಮಂದಿ ಎಡೆಸ್ನಾನ ಸೇವೆ ನೆರವೇರಿಸಿದರು.

ಮಂಗಳವಾರ ಬೆಳಗ್ಗೆ 7.05ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನೆರವೇರಿ, ಬ್ರಹ್ಮರಥೋತ್ಸವ ಜರುಗಿತು.141 ಮಂದಿ ಭಕ್ತರು ಬ್ರಹ್ಮರಥ ಸೇವೆ ನೆರವೇರಿಸಿದರು. ಬ್ರಹ್ಮರಥ ಹರಕೆ ಸೇವೆ ಸಲ್ಲಿಸಿದವರಿಗೆ  ಮಹಾಪ್ರಸಾದ ವಿತರಣೆಯಾಗುತ್ತದೆ.

ಲಕ್ಷದೀಪೋತ್ಸವ ಬಳಿಕ ಬೀದಿ ಮಡೆಸ್ನಾನ ನಡೆಯುತ್ತದೆ. ಕುಮಾರಧಾರ ತೀರ್ಥ ಸ್ನಾನದಿಂದ ದೇವಳದ ತನಕ ಸುಮಾರು 2ಕಿ.ಮೀ ದೂರದವರೆಗೆ ಉರುಳುತ್ತಾ ಸಾಗುವ ಅತ್ಯಂತ ಕಠಿಣವಾದ ಹರಕೆ ಸೇವೆ ಬೀದಿಯ ಉರುಳು ಸೇವೆ. ಈ ಸೇವೆ ಕೂಡಾ ಬ್ರಹ್ಮರಥೋತ್ಸವದ ಬಳಿಕ ಕೊನೆಗೊಳ್ಳುತ್ತದೆ. ನೂರಾರು ಮಂದಿ ಈ ಸೇವೆಯಲ್ಲಿ  ತೊಡಗಿಸಿಕೊಳ್ಳುತ್ತಾರೆ.

ಪ್ರತಿಕ್ರಿಯೆ :

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

27 minutes ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

9 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

11 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

16 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

16 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

1 day ago