ಈ ಯುವಕರ ತಂಡ ಸೇವೆ ಎಂಬ ಯಜ್ಞದಲ್ಲಿ ತೊಡಗಿಸಿಕೊಂಡಿದೆ. ಇದು ದೇವರ ಸೇವೆಯ ಜೊತೆಗೇ ಜನ ಸೇವೆ, ಅದೂ ಪುಟಾಣಿಗಳ ಆರೋಗ್ಯದ ಸೇವೆ.
ಬಂಟ್ವಾಳ ತಾಲೂಕಿನ ಅಕ್ಕಪಕ್ಕದ ಗ್ರಾಮಗಳಾದ ಕೆದಿಲ, ಕಡೇಶಿವಾಲಯ, ಪೆರ್ನೆಯ ಯುವಕರ ತಂಡ ಈಗ ಸೇವೆಗೆ ಇಳಿದಿರುವುದು. ಈ ಗ್ರಾಮದ ಸಂಘದ ಸ್ವಯಂಸೇವಕರು , ಹಿಂದು ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತರು ಜೊತೆಗೂಡಿ ಗ್ರಾಮದಲ್ಲಿ ಸೇವಾ ಕಾರ್ಯಕ್ಕಾಗಿ ಆಯಾ ಗ್ರಾಮದಲ್ಲಿ ಕೆದಿಲದಲ್ಲಿ ಯುವಕೇಸರಿ ಗಡಿಯಾರ, ಕಡೇಶಿವಾಲಯದಲ್ಲಿ ಯುವಶಕ್ತಿ ಕಡೇಶಿವಾಲಯ, ಪೆರ್ನೆಯಲ್ಲಿ ಯುವಸ್ಪಂದನ ಪೆರ್ನೆ ಎನ್ನುವ ಹೆಸರಿನಲ್ಲಿ ಸಂಘಟನೆ ಆರಂಬಿಸಿ ಎಲೆಮರೆಯ ಕಾಯಿಯಂತೆ ಅನೇಕ ಸೇವಾ ಕಾರ್ಯನಡೆಸುತ್ತಾ ಬಂದಿದ್ದಾರೆ, ಸದ್ಯ 4 ಮಕ್ಕಳ ಅನಾರೋಗ್ಯ ದಿಂದಿರುವುದಾಗಿ, ಅವರಿಗೆ ಚಿಕಿತ್ಸಾ ವೆಚ್ಚ ಬರಿಸಲು ಸಾಧ್ಯವಾಗದೆ ಕಂಗೆಟ್ಟಿರುವುದನ್ನು ಮನಗಂಡು ಈಗ ಎಲ್ಲಾ ಸಂಘಟನೆ ಜೊತೆಗೂಡಿ ಸೇವಾ ಯಜ್ಞದ ಸಂಕಲ್ಪ ಮಾಡಿದ್ದಾರೆ. ಇದಕ್ಕಾಗಿ ಅತೀ ದೊಡ್ಡ ಹನುಮಂತನ ವೇಷ (ಅಂದಾಜು 40 ಕೆಜಿ ತೂಕದ) ಹಾಕಿ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸಹಾಯಕ್ಕಾಗಿ ಇಳಿಯುತ್ತಿದ್ದಾರೆ.
ನಾಲ್ಕು ಜನ ಅನಾರೋಗ್ಯ ಪುಟಾಣಿಗಳ ವೈದ್ಯಕೀಯ ವೆಚ್ಚಕ್ಕಾಗಿ ಸೇವಾ ಯಜ್ಞ ಎನ್ನುವ ಹೆಸರಿನಲ್ಲಿ ಹತ್ತೂರೊಡೆಯ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಹನುಮಂತನ ವೇಷದ ಜೊತೆಗೆ ಸಹಾಯಕ್ಕಾಗಿ ಕೈ ಚಾಚುತ್ತಿದ್ದಾರೆ.ಆ ಪುಟಾಣಿಗಳ ಪ್ರಾಣ ಉಳಿಸಲು ಕೈ ಜೋಡಿಸಲು ಮನವಿ ಮಾಡಿದ್ದಾರೆ ಸಂಘಟನಗಳು. ಬಿಳಿ ಅಂಗಿ, ಕಪ್ಪು ಪೇಂಟ್, ಕೇಸರಿ ಶಾಲು ತೊಟ್ಟ ಮೂರು ಸಂಘಟನೆಯ ಕಾರ್ಯಕರ್ತರು ಡಬ್ಬ ಹಿಡಿದು ಬೃಹತ್ ಹನುಮಂತನ ವೇಷದ ಜೊತೆಗೆ ಇರುತ್ತಾರೆ ಈ ಬಡ ಪ್ರಾಣ ಉಳಿಸಲು ಈ ರೀತಿ ಪ್ರಯತ್ನಿಸುತ್ತಿದ್ದಾರೆ. ಕಣ್ಣಿಗೆ ಕಾಣುವ ದೇವರಾದ ಈ ಪುಟಾಣಿಗಳ ಜೀವ ಉಳಿಸಲು ಪಣತೊಟ್ಟಿದ್ದಾರೆ. ಕೈಲಾದ ಸಹಾಯ ಮಾಡಲು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…