Advertisement
MIRROR FOCUS

ಸೇವಾ ಯಜ್ಞದಲ್ಲಿ ಯುವಕರ ತಂಡ | ಪುತ್ತೂರು ಜಾತ್ರೆಯ ಗದ್ದೆಯಲ್ಲಿ ಪುಟಾಣಿಗಳ ವೈದ್ಯಕೀಯ ವೆಚ್ಚಕ್ಕಾಗಿ ಸಹಾಯ ಯಾಚನೆ |

Share

ಈ ಯುವಕರ ತಂಡ ಸೇವೆ ಎಂಬ ಯಜ್ಞದಲ್ಲಿ  ತೊಡಗಿಸಿಕೊಂಡಿದೆ. ಇದು ದೇವರ ಸೇವೆಯ ಜೊತೆಗೇ ಜನ ಸೇವೆ, ಅದೂ ಪುಟಾಣಿಗಳ ಆರೋಗ್ಯದ ಸೇವೆ.

ಬಂಟ್ವಾಳ ತಾಲೂಕಿನ ಅಕ್ಕಪಕ್ಕದ ಗ್ರಾಮಗಳಾದ ಕೆದಿಲ, ಕಡೇಶಿವಾಲಯ, ಪೆರ್ನೆಯ ಯುವಕರ ತಂಡ ಈಗ ಸೇವೆಗೆ ಇಳಿದಿರುವುದು.  ಈ ಗ್ರಾಮದ ಸಂಘದ ಸ್ವಯಂಸೇವಕರು , ಹಿಂದು ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತರು ಜೊತೆಗೂಡಿ ಗ್ರಾಮದಲ್ಲಿ ಸೇವಾ ಕಾರ್ಯಕ್ಕಾಗಿ ಆಯಾ ಗ್ರಾಮದಲ್ಲಿ ಕೆದಿಲದಲ್ಲಿ ಯುವಕೇಸರಿ ಗಡಿಯಾರ,  ಕಡೇಶಿವಾಲಯದಲ್ಲಿ ಯುವಶಕ್ತಿ ಕಡೇಶಿವಾಲಯ, ಪೆರ್ನೆಯಲ್ಲಿ ಯುವಸ್ಪಂದನ ಪೆರ್ನೆ ಎನ್ನುವ ಹೆಸರಿನಲ್ಲಿ ಸಂಘಟನೆ ಆರಂಬಿಸಿ ಎಲೆಮರೆಯ ಕಾಯಿಯಂತೆ ಅನೇಕ ಸೇವಾ ಕಾರ್ಯನಡೆಸುತ್ತಾ ಬಂದಿದ್ದಾರೆ, ಸದ್ಯ  4 ಮಕ್ಕಳ ಅನಾರೋಗ್ಯ ದಿಂದಿರುವುದಾಗಿ, ಅವರಿಗೆ ಚಿಕಿತ್ಸಾ ವೆಚ್ಚ ಬರಿಸಲು ಸಾಧ್ಯವಾಗದೆ ಕಂಗೆಟ್ಟಿರುವುದನ್ನು ಮನಗಂಡು ಈಗ ಎಲ್ಲಾ ಸಂಘಟನೆ ಜೊತೆಗೂಡಿ ಸೇವಾ ಯಜ್ಞದ ಸಂಕಲ್ಪ ಮಾಡಿದ್ದಾರೆ. ಇದಕ್ಕಾಗಿ ಅತೀ ದೊಡ್ಡ ಹನುಮಂತನ ವೇಷ (ಅಂದಾಜು 40 ಕೆಜಿ ತೂಕದ) ಹಾಕಿ  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸಹಾಯಕ್ಕಾಗಿ ಇಳಿಯುತ್ತಿದ್ದಾರೆ.

ನಾಲ್ಕು ಜನ  ಅನಾರೋಗ್ಯ  ಪುಟಾಣಿಗಳ ವೈದ್ಯಕೀಯ ವೆಚ್ಚಕ್ಕಾಗಿ ಸೇವಾ ಯಜ್ಞ ಎನ್ನುವ ಹೆಸರಿನಲ್ಲಿ ಹತ್ತೂರೊಡೆಯ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ  ಹನುಮಂತನ ವೇಷದ ಜೊತೆಗೆ ಸಹಾಯಕ್ಕಾಗಿ ಕೈ ಚಾಚುತ್ತಿದ್ದಾರೆ.ಆ ಪುಟಾಣಿಗಳ ಪ್ರಾಣ ಉಳಿಸಲು  ಕೈ ಜೋಡಿಸಲು ಮನವಿ ಮಾಡಿದ್ದಾರೆ ಸಂಘಟನಗಳು. ಬಿಳಿ ಅಂಗಿ, ಕಪ್ಪು ಪೇಂಟ್, ಕೇಸರಿ ಶಾಲು ತೊಟ್ಟ ಮೂರು ಸಂಘಟನೆಯ ಕಾರ್ಯಕರ್ತರು ಡಬ್ಬ ಹಿಡಿದು ಬೃಹತ್ ಹನುಮಂತನ ವೇಷದ ಜೊತೆಗೆ ಇರುತ್ತಾರೆ ಈ ಬಡ ಪ್ರಾಣ ಉಳಿಸಲು ಈ ರೀತಿ ಪ್ರಯತ್ನಿಸುತ್ತಿದ್ದಾರೆ. ಕಣ್ಣಿಗೆ ಕಾಣುವ ದೇವರಾದ ಈ ಪುಟಾಣಿಗಳ ಜೀವ ಉಳಿಸಲು ಪಣತೊಟ್ಟಿದ್ದಾರೆ. ಕೈಲಾದ ಸಹಾಯ ಮಾಡಲು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago