Advertisement
MIRROR FOCUS

ಸೇವಾ ಯಜ್ಞದಲ್ಲಿ ಯುವಕರ ತಂಡ | ಪುತ್ತೂರು ಜಾತ್ರೆಯ ಗದ್ದೆಯಲ್ಲಿ ಪುಟಾಣಿಗಳ ವೈದ್ಯಕೀಯ ವೆಚ್ಚಕ್ಕಾಗಿ ಸಹಾಯ ಯಾಚನೆ |

Share

ಈ ಯುವಕರ ತಂಡ ಸೇವೆ ಎಂಬ ಯಜ್ಞದಲ್ಲಿ  ತೊಡಗಿಸಿಕೊಂಡಿದೆ. ಇದು ದೇವರ ಸೇವೆಯ ಜೊತೆಗೇ ಜನ ಸೇವೆ, ಅದೂ ಪುಟಾಣಿಗಳ ಆರೋಗ್ಯದ ಸೇವೆ.

ಬಂಟ್ವಾಳ ತಾಲೂಕಿನ ಅಕ್ಕಪಕ್ಕದ ಗ್ರಾಮಗಳಾದ ಕೆದಿಲ, ಕಡೇಶಿವಾಲಯ, ಪೆರ್ನೆಯ ಯುವಕರ ತಂಡ ಈಗ ಸೇವೆಗೆ ಇಳಿದಿರುವುದು.  ಈ ಗ್ರಾಮದ ಸಂಘದ ಸ್ವಯಂಸೇವಕರು , ಹಿಂದು ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತರು ಜೊತೆಗೂಡಿ ಗ್ರಾಮದಲ್ಲಿ ಸೇವಾ ಕಾರ್ಯಕ್ಕಾಗಿ ಆಯಾ ಗ್ರಾಮದಲ್ಲಿ ಕೆದಿಲದಲ್ಲಿ ಯುವಕೇಸರಿ ಗಡಿಯಾರ,  ಕಡೇಶಿವಾಲಯದಲ್ಲಿ ಯುವಶಕ್ತಿ ಕಡೇಶಿವಾಲಯ, ಪೆರ್ನೆಯಲ್ಲಿ ಯುವಸ್ಪಂದನ ಪೆರ್ನೆ ಎನ್ನುವ ಹೆಸರಿನಲ್ಲಿ ಸಂಘಟನೆ ಆರಂಬಿಸಿ ಎಲೆಮರೆಯ ಕಾಯಿಯಂತೆ ಅನೇಕ ಸೇವಾ ಕಾರ್ಯನಡೆಸುತ್ತಾ ಬಂದಿದ್ದಾರೆ, ಸದ್ಯ  4 ಮಕ್ಕಳ ಅನಾರೋಗ್ಯ ದಿಂದಿರುವುದಾಗಿ, ಅವರಿಗೆ ಚಿಕಿತ್ಸಾ ವೆಚ್ಚ ಬರಿಸಲು ಸಾಧ್ಯವಾಗದೆ ಕಂಗೆಟ್ಟಿರುವುದನ್ನು ಮನಗಂಡು ಈಗ ಎಲ್ಲಾ ಸಂಘಟನೆ ಜೊತೆಗೂಡಿ ಸೇವಾ ಯಜ್ಞದ ಸಂಕಲ್ಪ ಮಾಡಿದ್ದಾರೆ. ಇದಕ್ಕಾಗಿ ಅತೀ ದೊಡ್ಡ ಹನುಮಂತನ ವೇಷ (ಅಂದಾಜು 40 ಕೆಜಿ ತೂಕದ) ಹಾಕಿ  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸಹಾಯಕ್ಕಾಗಿ ಇಳಿಯುತ್ತಿದ್ದಾರೆ.

ನಾಲ್ಕು ಜನ  ಅನಾರೋಗ್ಯ  ಪುಟಾಣಿಗಳ ವೈದ್ಯಕೀಯ ವೆಚ್ಚಕ್ಕಾಗಿ ಸೇವಾ ಯಜ್ಞ ಎನ್ನುವ ಹೆಸರಿನಲ್ಲಿ ಹತ್ತೂರೊಡೆಯ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ  ಹನುಮಂತನ ವೇಷದ ಜೊತೆಗೆ ಸಹಾಯಕ್ಕಾಗಿ ಕೈ ಚಾಚುತ್ತಿದ್ದಾರೆ.ಆ ಪುಟಾಣಿಗಳ ಪ್ರಾಣ ಉಳಿಸಲು  ಕೈ ಜೋಡಿಸಲು ಮನವಿ ಮಾಡಿದ್ದಾರೆ ಸಂಘಟನಗಳು. ಬಿಳಿ ಅಂಗಿ, ಕಪ್ಪು ಪೇಂಟ್, ಕೇಸರಿ ಶಾಲು ತೊಟ್ಟ ಮೂರು ಸಂಘಟನೆಯ ಕಾರ್ಯಕರ್ತರು ಡಬ್ಬ ಹಿಡಿದು ಬೃಹತ್ ಹನುಮಂತನ ವೇಷದ ಜೊತೆಗೆ ಇರುತ್ತಾರೆ ಈ ಬಡ ಪ್ರಾಣ ಉಳಿಸಲು ಈ ರೀತಿ ಪ್ರಯತ್ನಿಸುತ್ತಿದ್ದಾರೆ. ಕಣ್ಣಿಗೆ ಕಾಣುವ ದೇವರಾದ ಈ ಪುಟಾಣಿಗಳ ಜೀವ ಉಳಿಸಲು ಪಣತೊಟ್ಟಿದ್ದಾರೆ. ಕೈಲಾದ ಸಹಾಯ ಮಾಡಲು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

37 minutes ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 hour ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

22 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago