MIRROR FOCUS

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ, ಹಣ್ಣು ಸಂಸ್ಕರಣೆ ಹಾಗು ಮೌಲ್ಯವರ್ಧನೆಗೆ, ಸಾಂಪ್ರದಾಯಿಕ ಹಣ್ಣು, ಅಡುಗೆ, ಆಹಾರ, ಅದರ ಜತೆಗೆ ಸಮಗ್ರ ಕೃಷಿ ಉದ್ಯಮಶೀಲತೆಗೆ(Business) ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶದಿಂದ ನವತೇಜ, ಪುತ್ತೂರು(Puttur) ಸ್ಥಳೀಯ ಪ್ರಗತಿಪರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುತ್ತಾ ಇರುವ ಹಲಸು ಹಣ್ಣು ಮೇಳದ(Jack Fruit Mela) ಏಳನೇ ಆವೃತ್ತಿ ಇದೇ ಮೇ ತಿಂಗಳ 24-25-26 ರಂದು ಪುತ್ತೂರಿನ ಜೈನ ಭವನದಲ್ಲಿ ನಡೆಯಲಿದೆ.

Advertisement

ಈ ಮೂರು ದಿನಗಳ ಹಣ್ಣು ಮೇಳದಲ್ಲಿ ವಿವಿಧ ಹಣ್ಣುಗಳ ಗಿಡಗಳು, ಪ್ರಾದೇಶಿಕ ಹಾಗು ದೇಸಿ ವಿದೇಶಿ ಹಣ್ಣುಗಳ ಪ್ರದರ್ಶನ ಹಾಗು ಮಾರಾಟ, ಹಣ್ಣು ಹಾಗು ಕೃಷಿ ಉದ್ಯಮ, ಸ್ವಾದಿಷ್ಟ ಆಹಾರ ಮೇಳ ಹೀಗೆ ಸುಮಾರು 60 ವಿವಿಧ ಮಳಿಗೆಗಳು ಇರಲಿವೆ. ಸೀಮಿತ ಸ್ಥಳ, ಉತ್ತಮ ವ್ಯವಸ್ಥೆ ಎರಡನ್ನೂ ಗಮನ ಇಟ್ಟುಕೊಂಡು ನಿಯಮಿತ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಉದ್ದೇಶ ಆಧಾರದಲ್ಲಿ ಹಲಸು – ಹಣ್ಣು – ಕೃಷಿ – ಆಹಾರ ಸಂಬಂಧ ಉದ್ಯಮ ಪ್ರಸ್ತುತಿಗಳಿಗೆ ಪ್ರಾಶಸ್ತ್ಯ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತದೆ.

ಈಗಾಗಲೇ ಹಂತ ಹಂತವಾಗಿ ಸ್ಥಳೀಯ ಸಮುದಾಯದಲ್ಲಿ ಉತ್ತಮ ಪ್ರಚಾರ ಪಡೆಯುತ್ತಾ, ಸಾರ್ವಜನಿಕರ ಪ್ರೋತ್ಸಾಹ ಹೆಚ್ಚುತ್ತಾ ಬೆಳೆದಿರುವ ಹಲಸು ಹಣ್ಣು ಮೇಳಕ್ಕೆ ಈ ವರ್ಷ ಇನ್ನೂ ಉತ್ತಮ ರೀತಿಯ ಸಾರ್ವಜನಿಕ ಸ್ಪಂದನೆ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕ ಸಿದ್ಧತೆ, ಪ್ರಚಾರ ಮಾಡುತ್ತಾ ಇದ್ದೇವೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಮಳಿಗೆಗಳ ಮಾಹಿತಿ ಹಾಗು ಖಚಿತ ಮಾಡುವ ಬಗ್ಗೆ ಕೂಡಲೇ ಸುಹಾಸ್ ಮರಿಕೆ 948-053-5708 ಅವರನ್ನು ಸಂಪರ್ಕಿಸಬೇಕು ಎಂದು ವಿನಂತಿ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

3 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

3 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

3 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

3 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

17 hours ago