Advertisement
MIRROR FOCUS

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

Share

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ, ಹಣ್ಣು ಸಂಸ್ಕರಣೆ ಹಾಗು ಮೌಲ್ಯವರ್ಧನೆಗೆ, ಸಾಂಪ್ರದಾಯಿಕ ಹಣ್ಣು, ಅಡುಗೆ, ಆಹಾರ, ಅದರ ಜತೆಗೆ ಸಮಗ್ರ ಕೃಷಿ ಉದ್ಯಮಶೀಲತೆಗೆ(Business) ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶದಿಂದ ನವತೇಜ, ಪುತ್ತೂರು(Puttur) ಸ್ಥಳೀಯ ಪ್ರಗತಿಪರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುತ್ತಾ ಇರುವ ಹಲಸು ಹಣ್ಣು ಮೇಳದ(Jack Fruit Mela) ಏಳನೇ ಆವೃತ್ತಿ ಇದೇ ಮೇ ತಿಂಗಳ 24-25-26 ರಂದು ಪುತ್ತೂರಿನ ಜೈನ ಭವನದಲ್ಲಿ ನಡೆಯಲಿದೆ.

ಈ ಮೂರು ದಿನಗಳ ಹಣ್ಣು ಮೇಳದಲ್ಲಿ ವಿವಿಧ ಹಣ್ಣುಗಳ ಗಿಡಗಳು, ಪ್ರಾದೇಶಿಕ ಹಾಗು ದೇಸಿ ವಿದೇಶಿ ಹಣ್ಣುಗಳ ಪ್ರದರ್ಶನ ಹಾಗು ಮಾರಾಟ, ಹಣ್ಣು ಹಾಗು ಕೃಷಿ ಉದ್ಯಮ, ಸ್ವಾದಿಷ್ಟ ಆಹಾರ ಮೇಳ ಹೀಗೆ ಸುಮಾರು 60 ವಿವಿಧ ಮಳಿಗೆಗಳು ಇರಲಿವೆ. ಸೀಮಿತ ಸ್ಥಳ, ಉತ್ತಮ ವ್ಯವಸ್ಥೆ ಎರಡನ್ನೂ ಗಮನ ಇಟ್ಟುಕೊಂಡು ನಿಯಮಿತ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಉದ್ದೇಶ ಆಧಾರದಲ್ಲಿ ಹಲಸು – ಹಣ್ಣು – ಕೃಷಿ – ಆಹಾರ ಸಂಬಂಧ ಉದ್ಯಮ ಪ್ರಸ್ತುತಿಗಳಿಗೆ ಪ್ರಾಶಸ್ತ್ಯ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತದೆ.

ಈಗಾಗಲೇ ಹಂತ ಹಂತವಾಗಿ ಸ್ಥಳೀಯ ಸಮುದಾಯದಲ್ಲಿ ಉತ್ತಮ ಪ್ರಚಾರ ಪಡೆಯುತ್ತಾ, ಸಾರ್ವಜನಿಕರ ಪ್ರೋತ್ಸಾಹ ಹೆಚ್ಚುತ್ತಾ ಬೆಳೆದಿರುವ ಹಲಸು ಹಣ್ಣು ಮೇಳಕ್ಕೆ ಈ ವರ್ಷ ಇನ್ನೂ ಉತ್ತಮ ರೀತಿಯ ಸಾರ್ವಜನಿಕ ಸ್ಪಂದನೆ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕ ಸಿದ್ಧತೆ, ಪ್ರಚಾರ ಮಾಡುತ್ತಾ ಇದ್ದೇವೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಮಳಿಗೆಗಳ ಮಾಹಿತಿ ಹಾಗು ಖಚಿತ ಮಾಡುವ ಬಗ್ಗೆ ಕೂಡಲೇ ಸುಹಾಸ್ ಮರಿಕೆ 948-053-5708 ಅವರನ್ನು ಸಂಪರ್ಕಿಸಬೇಕು ಎಂದು ವಿನಂತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

4 minutes ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

13 minutes ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

1 hour ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

15 hours ago