ದೇಶದಾದ್ಯಂತ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಬಳಿಕ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ವಿವಿದೆಡೆ ನಡೆದ ದುರ್ಘಟನೆಯಲ್ಲಿ ಒಟ್ಟು 13 ಮಂದಿ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಹಠಾತ್ ಪ್ರವಾಹ ಬಂದು ಜನರು ಕೊಚ್ಚಿ ಹೋಗಿದ್ದಾರೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಇನ್ನೆರಡು ದುರ್ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಜೈಲ್ಪೈಗುರಿಯಲ್ಲಿ, ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಅಪ್ಪಳಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ 15 ವರ್ಷದ ಬಾಲಕ ಮತ್ತು 19 ಮತ್ತು 22 ವರ್ಷದ ಇಬ್ಬರು ಯುವಕರು ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಮಳೆ ನೀರಿನಿಂದ ತುಂಬಿದ್ದ ಹಳ್ಳದಲ್ಲಿ ಮುಳುಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದುರ್ಗಾ ಪೂಜೆ ಹಬ್ಬದ ಅಂತಿಮ ದಿನದಂದು ಜನರು ದುರ್ಗಾ ಮೂರ್ತಿಯ ವಿಸರ್ಜನೆಗೆ ನದಿಗೆ ತೆರಳುತ್ತಾರೆ. ಈ ಸಮಯದಲ್ಲಿ ಇಂತಹ ದುರ್ಘಟನೆ ನಡೆಯುತ್ತಿದೆ. ಕಳೆದ ಬಾರಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಮಹಾರಾಷ್ಟ್ರದಾದ್ಯಂತ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹರಿಯಾಣದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490