ದೇಶದಾದ್ಯಂತ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಬಳಿಕ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ವಿವಿದೆಡೆ ನಡೆದ ದುರ್ಘಟನೆಯಲ್ಲಿ ಒಟ್ಟು 13 ಮಂದಿ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಹಠಾತ್ ಪ್ರವಾಹ ಬಂದು ಜನರು ಕೊಚ್ಚಿ ಹೋಗಿದ್ದಾರೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಇನ್ನೆರಡು ದುರ್ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಜೈಲ್ಪೈಗುರಿಯಲ್ಲಿ, ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಅಪ್ಪಳಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ 15 ವರ್ಷದ ಬಾಲಕ ಮತ್ತು 19 ಮತ್ತು 22 ವರ್ಷದ ಇಬ್ಬರು ಯುವಕರು ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಮಳೆ ನೀರಿನಿಂದ ತುಂಬಿದ್ದ ಹಳ್ಳದಲ್ಲಿ ಮುಳುಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದುರ್ಗಾ ಪೂಜೆ ಹಬ್ಬದ ಅಂತಿಮ ದಿನದಂದು ಜನರು ದುರ್ಗಾ ಮೂರ್ತಿಯ ವಿಸರ್ಜನೆಗೆ ನದಿಗೆ ತೆರಳುತ್ತಾರೆ. ಈ ಸಮಯದಲ್ಲಿ ಇಂತಹ ದುರ್ಘಟನೆ ನಡೆಯುತ್ತಿದೆ. ಕಳೆದ ಬಾರಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಮಹಾರಾಷ್ಟ್ರದಾದ್ಯಂತ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹರಿಯಾಣದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.
ಎಂ ಜಿ ಸಿದ್ದೇಶ ರಾಮ, 5 ನೇ ತರಗತಿ ಎಂ ಜಿ ಸಿದ್ದೇಶ…
ಸಾನ್ವಿ ದೊಡ್ಡಮನೆ, 8 ನೇ ತರಗತಿ, ಕ್ನನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ…
ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ…
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆಗಮನದ ನಂತರ, ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದ…
ಹಿರಿಯ ತಲೆಮಾರಿನವರಿಗೆ ಅಸಹ್ಯವೆನಿಸುವ ಲೈಂಗಿಕ ವರ್ತನೆಗಳಲ್ಲಿ ಮುಂದುವರೆಯಲು ಹೊಸ ತಲೆಮಾರಿನ ಯುವ ಜನರಿಗೆ…
ನಗರದಲ್ಲಿ ಮಾತ್ರಾ ಕಂಡುಬರುತ್ತಿದ್ದ ಸಂಸ್ಕೃತಿಯೊಂದು ಈಗ ಗ್ರಾಮೀಣ ಭಾಗಕ್ಕೂ ತಲಪಿದೆ. ಅದರಲ್ಲೂ ಕುಕ್ಕೆ…