ದೇಶದಾದ್ಯಂತ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಬಳಿಕ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ವಿವಿದೆಡೆ ನಡೆದ ದುರ್ಘಟನೆಯಲ್ಲಿ ಒಟ್ಟು 13 ಮಂದಿ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಹಠಾತ್ ಪ್ರವಾಹ ಬಂದು ಜನರು ಕೊಚ್ಚಿ ಹೋಗಿದ್ದಾರೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಇನ್ನೆರಡು ದುರ್ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಜೈಲ್ಪೈಗುರಿಯಲ್ಲಿ, ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಅಪ್ಪಳಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ 15 ವರ್ಷದ ಬಾಲಕ ಮತ್ತು 19 ಮತ್ತು 22 ವರ್ಷದ ಇಬ್ಬರು ಯುವಕರು ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಮಳೆ ನೀರಿನಿಂದ ತುಂಬಿದ್ದ ಹಳ್ಳದಲ್ಲಿ ಮುಳುಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದುರ್ಗಾ ಪೂಜೆ ಹಬ್ಬದ ಅಂತಿಮ ದಿನದಂದು ಜನರು ದುರ್ಗಾ ಮೂರ್ತಿಯ ವಿಸರ್ಜನೆಗೆ ನದಿಗೆ ತೆರಳುತ್ತಾರೆ. ಈ ಸಮಯದಲ್ಲಿ ಇಂತಹ ದುರ್ಘಟನೆ ನಡೆಯುತ್ತಿದೆ. ಕಳೆದ ಬಾರಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಮಹಾರಾಷ್ಟ್ರದಾದ್ಯಂತ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹರಿಯಾಣದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…