Advertisement
ರಾಷ್ಟ್ರೀಯ

ದುರ್ಗಾ ವಿಗ್ರಹ ವಿಸರ್ಜನೆ | ಪ್ರತ್ಯೇಕ ಘಟನೆಗಳಲ್ಲಿ 13 ಮಂದಿ ಸಾವು | ಹಲವರು ನಾಪತ್ತೆ |

Share

ದೇಶದಾದ್ಯಂತ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಬಳಿಕ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ವಿವಿದೆಡೆ ನಡೆದ ದುರ್ಘಟನೆಯಲ್ಲಿ ಒಟ್ಟು 13 ಮಂದಿ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಹಠಾತ್‌ ಪ್ರವಾಹ ಬಂದು ಜನರು ಕೊಚ್ಚಿ ಹೋಗಿದ್ದಾರೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಇನ್ನೆರಡು ದುರ್ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಜೈಲ್‌ಪೈಗುರಿಯಲ್ಲಿ, ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಅಪ್ಪಳಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ 15 ವರ್ಷದ ಬಾಲಕ ಮತ್ತು 19 ಮತ್ತು 22 ವರ್ಷದ ಇಬ್ಬರು ಯುವಕರು ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಮಳೆ ನೀರಿನಿಂದ ತುಂಬಿದ್ದ ಹಳ್ಳದಲ್ಲಿ ಮುಳುಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದುರ್ಗಾ ಪೂಜೆ ಹಬ್ಬದ ಅಂತಿಮ ದಿನದಂದು ಜನರು ದುರ್ಗಾ ಮೂರ್ತಿಯ ವಿಸರ್ಜನೆಗೆ ನದಿಗೆ ತೆರಳುತ್ತಾರೆ. ಈ ಸಮಯದಲ್ಲಿ ಇಂತಹ ದುರ್ಘಟನೆ ನಡೆಯುತ್ತಿದೆ. ಕಳೆದ ಬಾರಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಮಹಾರಾಷ್ಟ್ರದಾದ್ಯಂತ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹರಿಯಾಣದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

10 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

11 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

12 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

17 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

20 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

24 hours ago