ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ (Mansoon Rain)ಬಂದರೆ ರಾಜ್ಯ ಹಾಗೂ ದೇಶ ಸುಭೀಕ್ಷವಾಗಿರುತ್ತದೆ. ಆದರೆ ಈ ಬಾರಿ ತೀರಾ ಬರಗಾಲದ (Drought) ಛಾಯೆ ರಾಜ್ಯದಲ್ಲಿ ಆವರಿಸಿದೆ. ಮಳೆ, ಬೆಳೆ ಇಲ್ಲದೆ ಜನ ತತ್ತರಿಸಿ ಹೋಗಿದ್ದಾರೆ. ಮಳೆಗಾಲದಲ್ಲೇ ನೀರಿಗೆ ತೀವ್ರ ತತ್ವಾರ ಆರಂಭವಾಗಿದೆ. ಇನ್ನು ಬೆಳೆ, ಜಾನುವಾರಗಳ ಕಥೆ ಕೇಳೋದೆ ಬೇಡ.
ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ತಾಲೂಕುಗಳು ಸಹ ಸೇರಿವೆ.
ಬೆಂಗಳೂರಲ್ಲಿ ಬರದ ಘೋಷಣೆಯ ಬೆನ್ನಲ್ಲೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗುವ ಹಿನ್ನೆಲೆ ರಾಜಧಾನಿಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದೆ. ಪ್ರತಿ ಗಂಟೆಗೆ 35ರಿಂದ 40 ಕಿ.ಮೀ ಬಿರುಗಾಳಿ ಬೀಸಲಿದೆ. ಆಂಧ್ರಪ್ರದೇಶ, ತಮಿಳುನಾಡು ಮೂಲಕ ರಾಜ್ಯಕ್ಕೆ ಮಳೆ ಪ್ರವೇಶವಾಗಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಗೂ ಸಹ ಮಳೆ ಆಗುವ ಸಾಧ್ಯತೆ ಇದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…