Advertisement
MIRROR FOCUS

ರಾಜ್ಯದಲ್ಲಿ ಕಾಡಲಿದೆ ಜಲಕ್ಷಾಮ | ಬೆಂಗಳೂರು, ಮೈಸೂರಿನಲ್ಲಿ ಎಚ್ಚರ | ಹನಿ ಹನಿ ನೀರಿಗೂ ತತ್ವಾರ ಸಾಧ್ಯತೆ |

Share

ರಾಜ್ಯದಲ್ಲಿ ಈ ಬಾರಿ ವರುಣ(Rain) ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೀರಿನ ಬವಣೆ (Water scarcity)ಎದುರಿಸಬೇಕಾಗಿದೆ. ಇನ್ನು ಮಳೆ ಆರಂಭಕ್ಕೆ 3-4 ತಿಂಗಳು ಬಾಕಿ ಇದ್ದು ಈಗಲೇ ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಈ ಬಾರಿ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಕಡಿಮೆ ಮಳೆ ಬಿದ್ದ ಹಿನ್ನೆಲೆ ಬೆಂಗಳೂರು(Bengaluru), ಮೈಸೂರಿಗರಿಗೆ(Mysore) ಜಲಕ್ಷಾಮ ಎದುರಾಗುವ ಮುನ್ಸೂಚನೆ ಇದೆ. ಉಳಿದಂತೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಪೆಬ್ರವರಿ ತಿಂಗಳಲ್ಲೇ ನೀರಿನ ಆತಂಕ ಶುರುವಾಗಿದೆ.

ಜೀವನಾಡಿ KRS ಡ್ಯಾಂ ನೀರು ಬರಿದಾಗ್ತಿದ್ದು ಬೆಂಗಳೂರು, ಮೈಸೂರಿಗರು ಇನ್ನು ಎಚ್ಚರದಿಂದಿರಬೇಕು. ಮಿತವಾಗಿ ನೀರು ಬಳಸದಿದ್ದರೆ ನೀರಿನ ಗಂಡಾಂತರ ಕಾದಿದೆ. ಕೆಆರ್​​ಎಸ್​​​ ಡ್ಯಾಂನಲ್ಲಿ ಈಗ ಕೇವಲ 16 ಟಿಎಂಸಿ ನೀರು ಮಾತ್ರ ಇದ್ದು, ಅದರಲ್ಲಿ 5 ಟಿಎಂಸಿ ನೀರು ಫೆಬ್ರವರಿ, ಮಾರ್ಚ್‌ನಲ್ಲಿ ತಮಿಳುನಾಡಿಗೆ ಬಿಡಬೇಕು. ಬಳಿಕ ಕೇವಲ 11 ಟಿಎಂಸಿ ಉಳಿಯುತ್ತೆ.

11 ಟಿಎಂಸಿಯಲ್ಲಿ 8 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಈ ನೀರನ್ನು ಬಳಕೆ ಮಾಡಿಕೊಳ್ಳಲು ಆಗೋದಿಲ್ಲ. ಪ್ರತಿ ತಿಂಗಳು ಮೈಸೂರು, ಬೆಂಗಳೂರಿಗೆ 2 ಟಿಎಂಸಿ ಬೇಕಿದೆ. ಹೀಗಾಗಿ ಡ್ಯಾಂನಲ್ಲಿರೋದು ಕೇವಲ 2 ತಿಂಗಳಿಗಾಗುವಷ್ಟು ನೀರು ಇರೋದರಿಂದ ಬೆಂಗಳೂರು, ಮೈಸೂರಿಗರಿಗೆ ಜಲಕ್ಷಾಮ ಎದುರಾಗುವ ಮುನ್ಸೂಚನೆ ಇದೆ.

ಈಗಾಗಲೇ ಕಾವೇರಿ ಜಲನಯನ ಪ್ರದೇಶದಲ್ಲಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ. ಅಲ್ಲಿನ ಯಾವುದೇ ರೈತರು ಬಿತ್ತನೆ ಕಾರ್ಯವನ್ನು ಕೂಡ ಮಾಡಿಲ್ಲ. ನೀರಿನ ಅಭಾವದಿಂದ ರೈತರು ಕೈ ಚೆಲ್ಲಿ ಅಸಹಾಯಕಾರಿ ಕುಳಿತಿದ್ದಾರೆ. ಮತ್ತೊಂದು ಕಡೆ ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ಒಂದು ತಿಂಗಳಿನಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಕಷ್ಟ ಆಗಲಿದೆ, ಈ ನಡುವೆ ವರುಣ ಕೃಪೆ ತೋರಿದರೆ ಜನರು ನಿಟ್ಟುಸಿರು ಬಿಡಬಹುದು.

ಜಾತ್ರೆಗಾಗಿ ನೀರು: ‘ಕೃಷಿಗೆ ಬಳಸಬೇಡಿ; ಫೆಬ್ರವರಿ 26 ರಂದು ಮೈಲಾರಲಿಂಗೇಶನ ಜಾತ್ರೆ ನಡೆಯಲಿದೆ. ಹೀಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡಲಾಗಿದೆ. ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳಿಗೆ ಬಳಸಬಾರದು ಅಂತಾ ವಿಜಯನಗರ ಜಿಲ್ಲಾಡಳಿತ ಹಾಗೂ ಹೂವಿನಹಡಗಲಿ ತಾಲೂಕು ಆಡಳಿತದಿಂದ ಆದೇಶ ಹೊರಡಿಸಲಾಗಿದೆ.

ಫೆ.18 ರಿಂದ 23ರವರೆಗೆ ನಿತ್ಯ 500 ಕ್ಯೂಸೆಕ್ ನೀರು ಹರಿಸಲು ಆದೇಶ ಹೊರಡಿಸಲಾಗಿದೆ. ಹಿಂಗಾರು – ಮುಂಗಾರಿನಲ್ಲಿ ಮಳೆ ಸಮರ್ಪಕ ಬಂದಿಲ್ಲ. ಬೇಸಿಗೆ ಮುನ್ನವೇ ಬತ್ತಿ ನದಿ ಹೋಗಿದೆ. ಇದರಿಂದ ಮೈಲಾರ ಜಾತ್ರೆಗೆ ಬರುವ ಭಕ್ತರಿಗೆ ಭಾರೀ ತೊಂದರೆ ಆಗುತ್ತೆ ಅನ್ನೋ ಕಾರಣಕ್ಕೆ ಜಾತ್ರೆ ಮತ್ತು ಕುಡಿಯುನ ನೀರಿನ ಉದ್ದೇಶಕ್ಕಾಗಿ ನೀರು ಹರಿಸಲಾಗುತ್ತಿದೆ. ಜನ-ಜಾನುವಾರುಗಳಿಗೆ ನೀರಿನ ಅಭಾವ ಆಗದಂತೆ ಕ್ರಮ ಕೈಗೊಂಡಿದ್ದೇವೆ. ನದಿ ತೀರದ ರೈತರು ಸಹಕರಿಸಬೇಕು ಎಂದ ಹೂವಿನಹಡಗಲಿ ತಹಶೀಲ್ದಾರ್ ಕಾರ್ತಿಕ್ ಮನವಿ ಮಾಡಿದ್ದಾರೆ.

ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7,082 ಗ್ರಾಮಗಳಲ್ಲಿ ಹಾಗೂ 1,193 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಬಹುದೆಂದು ಗುರುತಿಸಲಾಗಿದೆ, ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರವನ್ನು ಸಚಿವರು ನೀಡಿದ್ದಾರೆ.

ಪ್ರಸ್ತುತ 18 ಜಿಲ್ಲೆಗಳ 46 ತಾಲೂಕುಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು 46 ಗ್ರಾಮಗಳಿಗೆ 58 ಟ್ಯಾಂಕರ್‌ ಗಳ ಮೂಲಕ ಹಾಗೂ 156 ಗ್ರಾಮಗಳಲ್ಲಿ 183 ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ. ಅಲ್ಲದೆ, 4 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 46 ವಾರ್ಡ್ ಗಳಲ್ಲಿ 12 ಟ್ಯಾಂಕರ್ ಗಳ ಮೂಲಕ ತುರ್ತು ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ ಎಂದಿದ್ದಾರೆ.

ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಒದಗಿಸಲು ಸಿದ್ಧತೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಒಟ್ಟು 6,416 ಖಾಸಗಿ ಬೋರ್ವೆಲ್ ಗಳನ್ನು ಗುರುತಿಸಿದ್ದು, ಅವುಗಳಲ್ಲಿ 2,654 ಬೋರ್ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊಪ್ಪಳದಂತಹ ಪ್ರದೇಶದ ಕೆಲವು ಕಡೆ ಇನ್ನಷ್ಟು ಪರಿಸ್ಥಿತಿ ಗಂಭೀರವಾಗಿದೆ. ಇಲ್ಲಿನ ಜಮಲಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಜನರು ಊರ ಮುಂದಿರುವ  ಕೈ ಬೋರ್‌ನಿಂದ ನೀರು ತರಬೇಕು. ಗ್ರಾಮದಲ್ಲಿ ಹಾಕಲಾದ ಪೈಪ್‌ ಒಡೆದು ಹೋಗಿವೆ ಎನ್ನುತ್ತಾರೆ ಗ್ರಾಮಸ್ಥರು. ನೀರಿನ ಸಮಸ್ಯೆ ಇರುವುದರಿಂದ ಜನರು ಗ್ರಾಮದ ಮುಂದೇ ಇರುವ ಕೈ ಬೋರಿಗೆ ಬರುತ್ತಿದ್ದಾರೆ. ನೀರಿನ ಅಂತರ್ಜಲ ಕಡಿಮೆ ಇರುವುದರಿಂದ ಗಂಟೆಗೊಂದು ಬಿಂದಿಗೆ ತುಂಬುತ್ತವೆ. ನೀರಿಗಾಗಿ ಆಗಮಿಸಿ ಜನರು ಗಂಟೆಗಟ್ಟಲೆ ನೀರಿಗಾಗಿ ಬಿಸಿಲಿನಲ್ಲಿ ಕುಳಿತು ಕಾಯಬೇಕು.

ಬೆಂಗಳೂರಿನಲ್ಲಿ ಕೆಲವು ಕಡೆ ನೀರಿನ ಸಮಸ್ಯೆ ಇದೆ. ಪೀಣ್ಯದ ಕೆಲವು ಕಡೆ ಟ್ಯಾಂಕರ್‌ ನೀರಿನ ಜನರು ಮೊರೆ ಹೋಗಿದ್ದಾರೆ. ಒಂದು ಟ್ಯಾಂಕರ್‌ ನೀರಿನ ಬೆಲೆ ಕೆಲವು ಕಡೆ 2500 ರೂಪಾಯಿ ಇದೆ.  ಆರ್‌.ಆರ್‌. ನಗರದಲ್ಲಿ ಜನರು ಖಾಸಗಿ ಪೂರೈಕೆದಾರರಿಂದ 6,500 ಸಾವಿರ ಲೀಟರ್‌ ಸಾಮರ್ಥ್ಯದ ಟ್ಯಾಂಕರ್‌ಅನ್ನು 2,500 ರೂ. ಪಾವತಿಸಿ ಖರೀದಿಸಿದ್ದಾರೆ. ಕೊಳವೆಬಾವಿಯಲ್ಲಿ ನೀರಿನ ಮಟ್ಟ ಅಷ್ಟೊಂದು ಪ್ರಮಾಣದಲ್ಲಿ ಇಳಿಕೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

6 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

7 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

23 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 day ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago