ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |

March 22, 2022
9:22 PM

ಸ್ವಚ್ಛ ಭಾರತ ಈ ದೇಶದ ಕನಸು. ಇದೇ ಒಂದು ಆಂದೋಲನವಾಗಿದೆ, ಅಭಿಯಾನವಾಗಿದೆ. ಅದೇ ಮಾದರಿಯಲ್ಲಿ ನಡೆದರೆ ಬೆಳ್ಳಾರೆ ಪೇಟೆ ಈಗ ಸದ್ದಾಗುತ್ತಿದೆ. ಅದು ಸ್ವಚ್ಛತೆಗಾಗಿ ನಡೆಯುತ್ತಿರುವ ಸದ್ದು. ಕಸ ಹೆಕ್ಕುವುದು , ತ್ಯಾಜ್ಯ ವಿಲೇವಾರಿ ಮಾತ್ರವೇ ಸ್ವಚ್ಛತೆ ಭಾಗವಲ್ಲ, ಸಮರ್ಪಕ ಒಳಚರಂಡಿ ವ್ಯವಸ್ಥೆಯೂ ಸ್ವಚ್ಛತೆಯ ಭಾಗ ಎಂದು ಎಚ್ಚರಿಸುತ್ತಾರೆ ಸಾಮಾಜಿಕ ಕಾರ್ಯಕರ್ತರು. ಈ ಬಗ್ಗೆ ವರದಿ ಇಲ್ಲಿದೆ….

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು  ಜನರ ಆರೋಪ.

ಬೆಳ್ಳಾರೆ ಪೇಟೆಯಲ್ಲಿ ಕಳೆದ 4 ವರ್ಷದಿಂದ ಚರಂಡಿ ಅವ್ಯವಸ್ಥೆಇದೆ. ಇದರಿಂದಾಗಿ ನಿತ್ಯ ನರಕಯಾತನೆಯನ್ನು ಪೇಟೆಯ ಜನರು ಅನುಭವಿಸುತ್ತಿದ್ದಾರೆ. ಬೆಳ್ಳಾರೆ ಮೇಲಿನ ಪೇಟೆಯಿಂದ ಕೆಳಗಿನ ಪೇಟೆಯ ತನಕ ಇರುವ ಎಲ್ಲಾ ಹೋಟೆಲ್ ಗಳ ಹಾಗೂ ಅಂಗಡಿಗಳ ಸೇರಿದಂತೆ ಇತರ ನೀರುಗಳನ್ನು  ಅನಿವಾರ್ಯವಾಗಿ ನೇರವಾಗಿ ಚರಂಡಿಗೆ ಬಿಡುತ್ತಾರೆ. ಚರಂಡಿ ಕಾಮಗಾರಿ ಮಾಡುವಾಗ ನೀರು ಸರಾಗವಾಗಿ ಹೋಗುವ ರೀತಿಯಲ್ಲಿ ಮಾಡದೆ ಕಾಮಗಾರಿ ಮಾಡಿರುವುದರಿಂದ , ಕೊಳಚೆ ನೀರು ಚರಂಡಿಯಲ್ಲಿ ಶೇಖರಣೆಯಾಗುತ್ತಿದೆ ಎನ್ನುವುದು  ಈಗಿನ ಅಭಿಪ್ರಾಯವಾಗಿದೆ. ಹೀಗಾಗಿ ಈಗ ಪೇಟೆಯಲ್ಲಿ ವೀಪರೀತ ಸೊಳ್ಳೆ ಕಾಟ ಹಾಗೂ ದುರ್ನಾತ ಬೀರುತ್ತಿದೆ ಎಂದು ಜನರು ಹೇಳುತ್ತಾರೆ. ಆದರೆ ಕಟ್ಟಡದ ಮಾಲಕರು ಕೊಳಚೆ ನೀರಿನ ಪರೀಕ್ಷಾ ವರದಿಯನ್ನು ಗ್ರಾಮ ಪಂಚಾಯತ್‌ ಗೆ ಸಲ್ಲಿಸಿ, ಒಳ ಚರಂಡಿಗೆ  ಕೊಳಚೆ ನೀರನ್ನು ಬಿಡಲು ಅನುಮತಿ ಪಡೆದು ನೀರು ಬಿಡುತ್ತಾರೆ. ಆದರೂ ವಾಸನೆ ಬರುತ್ತಿರುವುದು  ಹೇಗೆ ಎನ್ನುವುದು  ಪ್ರಶ್ನೆಯಾಗಿದೆ.

ಒಳ ಚರಂಡಿ ಎಂದು ಮಾಡಿರುವ ಕಾಮಗಾರಿಗೆ ಮುಚ್ಚಿಗೆಯನ್ನು ಹಾಕಿರುವುದಿಲ್ಲ. ಒಳ ಚರಂಡಿ ವ್ಯವಸ್ಥೆ ಇದ್ದರೂ, ಮಳೆ ನೀರು ಮಾತ್ರ ರಸ್ತೆಯಲ್ಲಿಯೇ ಹರಿಯುವ ಸ್ಥಿತಿ ಇದೆ. ಇದರಿಂದಾಗಿ  ಸಂಚಾರಕ್ಕೆ ತೊಂದರೆಯಾಗುತ್ತದೆ. ಇದರ ಬಗ್ಗೆ ಮಾಧ್ಯಮಗಳು ಎಚ್ಚರಿಸಿದರೂ ಸ್ಥಳೀಯ ಪಂಚಾಯತ್‌ ಎಚ್ಚೆತ್ತುಕೊಂಡಿಲ್ಲ ಎನ್ನುವುದು  ಜನರ ಆರೋಪ. ಈ ಬಗ್ಗೆ ಮೌಖಿಕವಾಗಿ, ಈ ಮೇಲ್ ಮೂಲಕ ಅಧಿಕಾರಿಗಳಿಗೆ ಮಾಹಿತಿ ಹಾಗೂ ದೂರು ನೀಡಿದರೂ, ಸಮಸ್ಯೆ ಬಗೆಹರಿದಿಲ್ಲ. ಕಳೆದ ವಾರ ಆರೋಗ್ಯ ಅಧಿಕಾರಿಯೊಬ್ಬರು ಬಂದು ಭೇಟಿ ನೀಡಿದ್ದಾರೆ. ಹೀಗಿದ್ದರೂ ಯಾವುದೇ ಕ್ರಮವಾಗಿಲ್ಲ ಎನ್ನುವುದೇ ಅಚ್ಚರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror