Advertisement
MIRROR FOCUS

ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |

Share

ಸ್ವಚ್ಛ ಭಾರತ ಈ ದೇಶದ ಕನಸು. ಇದೇ ಒಂದು ಆಂದೋಲನವಾಗಿದೆ, ಅಭಿಯಾನವಾಗಿದೆ. ಅದೇ ಮಾದರಿಯಲ್ಲಿ ನಡೆದರೆ ಬೆಳ್ಳಾರೆ ಪೇಟೆ ಈಗ ಸದ್ದಾಗುತ್ತಿದೆ. ಅದು ಸ್ವಚ್ಛತೆಗಾಗಿ ನಡೆಯುತ್ತಿರುವ ಸದ್ದು. ಕಸ ಹೆಕ್ಕುವುದು , ತ್ಯಾಜ್ಯ ವಿಲೇವಾರಿ ಮಾತ್ರವೇ ಸ್ವಚ್ಛತೆ ಭಾಗವಲ್ಲ, ಸಮರ್ಪಕ ಒಳಚರಂಡಿ ವ್ಯವಸ್ಥೆಯೂ ಸ್ವಚ್ಛತೆಯ ಭಾಗ ಎಂದು ಎಚ್ಚರಿಸುತ್ತಾರೆ ಸಾಮಾಜಿಕ ಕಾರ್ಯಕರ್ತರು. ಈ ಬಗ್ಗೆ ವರದಿ ಇಲ್ಲಿದೆ….

Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು  ಜನರ ಆರೋಪ.

Advertisement

ಬೆಳ್ಳಾರೆ ಪೇಟೆಯಲ್ಲಿ ಕಳೆದ 4 ವರ್ಷದಿಂದ ಚರಂಡಿ ಅವ್ಯವಸ್ಥೆಇದೆ. ಇದರಿಂದಾಗಿ ನಿತ್ಯ ನರಕಯಾತನೆಯನ್ನು ಪೇಟೆಯ ಜನರು ಅನುಭವಿಸುತ್ತಿದ್ದಾರೆ. ಬೆಳ್ಳಾರೆ ಮೇಲಿನ ಪೇಟೆಯಿಂದ ಕೆಳಗಿನ ಪೇಟೆಯ ತನಕ ಇರುವ ಎಲ್ಲಾ ಹೋಟೆಲ್ ಗಳ ಹಾಗೂ ಅಂಗಡಿಗಳ ಸೇರಿದಂತೆ ಇತರ ನೀರುಗಳನ್ನು  ಅನಿವಾರ್ಯವಾಗಿ ನೇರವಾಗಿ ಚರಂಡಿಗೆ ಬಿಡುತ್ತಾರೆ. ಚರಂಡಿ ಕಾಮಗಾರಿ ಮಾಡುವಾಗ ನೀರು ಸರಾಗವಾಗಿ ಹೋಗುವ ರೀತಿಯಲ್ಲಿ ಮಾಡದೆ ಕಾಮಗಾರಿ ಮಾಡಿರುವುದರಿಂದ , ಕೊಳಚೆ ನೀರು ಚರಂಡಿಯಲ್ಲಿ ಶೇಖರಣೆಯಾಗುತ್ತಿದೆ ಎನ್ನುವುದು  ಈಗಿನ ಅಭಿಪ್ರಾಯವಾಗಿದೆ. ಹೀಗಾಗಿ ಈಗ ಪೇಟೆಯಲ್ಲಿ ವೀಪರೀತ ಸೊಳ್ಳೆ ಕಾಟ ಹಾಗೂ ದುರ್ನಾತ ಬೀರುತ್ತಿದೆ ಎಂದು ಜನರು ಹೇಳುತ್ತಾರೆ. ಆದರೆ ಕಟ್ಟಡದ ಮಾಲಕರು ಕೊಳಚೆ ನೀರಿನ ಪರೀಕ್ಷಾ ವರದಿಯನ್ನು ಗ್ರಾಮ ಪಂಚಾಯತ್‌ ಗೆ ಸಲ್ಲಿಸಿ, ಒಳ ಚರಂಡಿಗೆ  ಕೊಳಚೆ ನೀರನ್ನು ಬಿಡಲು ಅನುಮತಿ ಪಡೆದು ನೀರು ಬಿಡುತ್ತಾರೆ. ಆದರೂ ವಾಸನೆ ಬರುತ್ತಿರುವುದು  ಹೇಗೆ ಎನ್ನುವುದು  ಪ್ರಶ್ನೆಯಾಗಿದೆ.

Advertisement

ಒಳ ಚರಂಡಿ ಎಂದು ಮಾಡಿರುವ ಕಾಮಗಾರಿಗೆ ಮುಚ್ಚಿಗೆಯನ್ನು ಹಾಕಿರುವುದಿಲ್ಲ. ಒಳ ಚರಂಡಿ ವ್ಯವಸ್ಥೆ ಇದ್ದರೂ, ಮಳೆ ನೀರು ಮಾತ್ರ ರಸ್ತೆಯಲ್ಲಿಯೇ ಹರಿಯುವ ಸ್ಥಿತಿ ಇದೆ. ಇದರಿಂದಾಗಿ  ಸಂಚಾರಕ್ಕೆ ತೊಂದರೆಯಾಗುತ್ತದೆ. ಇದರ ಬಗ್ಗೆ ಮಾಧ್ಯಮಗಳು ಎಚ್ಚರಿಸಿದರೂ ಸ್ಥಳೀಯ ಪಂಚಾಯತ್‌ ಎಚ್ಚೆತ್ತುಕೊಂಡಿಲ್ಲ ಎನ್ನುವುದು  ಜನರ ಆರೋಪ. ಈ ಬಗ್ಗೆ ಮೌಖಿಕವಾಗಿ, ಈ ಮೇಲ್ ಮೂಲಕ ಅಧಿಕಾರಿಗಳಿಗೆ ಮಾಹಿತಿ ಹಾಗೂ ದೂರು ನೀಡಿದರೂ, ಸಮಸ್ಯೆ ಬಗೆಹರಿದಿಲ್ಲ. ಕಳೆದ ವಾರ ಆರೋಗ್ಯ ಅಧಿಕಾರಿಯೊಬ್ಬರು ಬಂದು ಭೇಟಿ ನೀಡಿದ್ದಾರೆ. ಹೀಗಿದ್ದರೂ ಯಾವುದೇ ಕ್ರಮವಾಗಿಲ್ಲ ಎನ್ನುವುದೇ ಅಚ್ಚರಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

52 mins ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

58 mins ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

1 hour ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

1 hour ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

8 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

9 hours ago