Advertisement
MIRROR FOCUS

ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |

Share

ಸ್ವಚ್ಛ ಭಾರತ ಈ ದೇಶದ ಕನಸು. ಇದೇ ಒಂದು ಆಂದೋಲನವಾಗಿದೆ, ಅಭಿಯಾನವಾಗಿದೆ. ಅದೇ ಮಾದರಿಯಲ್ಲಿ ನಡೆದರೆ ಬೆಳ್ಳಾರೆ ಪೇಟೆ ಈಗ ಸದ್ದಾಗುತ್ತಿದೆ. ಅದು ಸ್ವಚ್ಛತೆಗಾಗಿ ನಡೆಯುತ್ತಿರುವ ಸದ್ದು. ಕಸ ಹೆಕ್ಕುವುದು , ತ್ಯಾಜ್ಯ ವಿಲೇವಾರಿ ಮಾತ್ರವೇ ಸ್ವಚ್ಛತೆ ಭಾಗವಲ್ಲ, ಸಮರ್ಪಕ ಒಳಚರಂಡಿ ವ್ಯವಸ್ಥೆಯೂ ಸ್ವಚ್ಛತೆಯ ಭಾಗ ಎಂದು ಎಚ್ಚರಿಸುತ್ತಾರೆ ಸಾಮಾಜಿಕ ಕಾರ್ಯಕರ್ತರು. ಈ ಬಗ್ಗೆ ವರದಿ ಇಲ್ಲಿದೆ….

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು  ಜನರ ಆರೋಪ.

ಬೆಳ್ಳಾರೆ ಪೇಟೆಯಲ್ಲಿ ಕಳೆದ 4 ವರ್ಷದಿಂದ ಚರಂಡಿ ಅವ್ಯವಸ್ಥೆಇದೆ. ಇದರಿಂದಾಗಿ ನಿತ್ಯ ನರಕಯಾತನೆಯನ್ನು ಪೇಟೆಯ ಜನರು ಅನುಭವಿಸುತ್ತಿದ್ದಾರೆ. ಬೆಳ್ಳಾರೆ ಮೇಲಿನ ಪೇಟೆಯಿಂದ ಕೆಳಗಿನ ಪೇಟೆಯ ತನಕ ಇರುವ ಎಲ್ಲಾ ಹೋಟೆಲ್ ಗಳ ಹಾಗೂ ಅಂಗಡಿಗಳ ಸೇರಿದಂತೆ ಇತರ ನೀರುಗಳನ್ನು  ಅನಿವಾರ್ಯವಾಗಿ ನೇರವಾಗಿ ಚರಂಡಿಗೆ ಬಿಡುತ್ತಾರೆ. ಚರಂಡಿ ಕಾಮಗಾರಿ ಮಾಡುವಾಗ ನೀರು ಸರಾಗವಾಗಿ ಹೋಗುವ ರೀತಿಯಲ್ಲಿ ಮಾಡದೆ ಕಾಮಗಾರಿ ಮಾಡಿರುವುದರಿಂದ , ಕೊಳಚೆ ನೀರು ಚರಂಡಿಯಲ್ಲಿ ಶೇಖರಣೆಯಾಗುತ್ತಿದೆ ಎನ್ನುವುದು  ಈಗಿನ ಅಭಿಪ್ರಾಯವಾಗಿದೆ. ಹೀಗಾಗಿ ಈಗ ಪೇಟೆಯಲ್ಲಿ ವೀಪರೀತ ಸೊಳ್ಳೆ ಕಾಟ ಹಾಗೂ ದುರ್ನಾತ ಬೀರುತ್ತಿದೆ ಎಂದು ಜನರು ಹೇಳುತ್ತಾರೆ. ಆದರೆ ಕಟ್ಟಡದ ಮಾಲಕರು ಕೊಳಚೆ ನೀರಿನ ಪರೀಕ್ಷಾ ವರದಿಯನ್ನು ಗ್ರಾಮ ಪಂಚಾಯತ್‌ ಗೆ ಸಲ್ಲಿಸಿ, ಒಳ ಚರಂಡಿಗೆ  ಕೊಳಚೆ ನೀರನ್ನು ಬಿಡಲು ಅನುಮತಿ ಪಡೆದು ನೀರು ಬಿಡುತ್ತಾರೆ. ಆದರೂ ವಾಸನೆ ಬರುತ್ತಿರುವುದು  ಹೇಗೆ ಎನ್ನುವುದು  ಪ್ರಶ್ನೆಯಾಗಿದೆ.

ಒಳ ಚರಂಡಿ ಎಂದು ಮಾಡಿರುವ ಕಾಮಗಾರಿಗೆ ಮುಚ್ಚಿಗೆಯನ್ನು ಹಾಕಿರುವುದಿಲ್ಲ. ಒಳ ಚರಂಡಿ ವ್ಯವಸ್ಥೆ ಇದ್ದರೂ, ಮಳೆ ನೀರು ಮಾತ್ರ ರಸ್ತೆಯಲ್ಲಿಯೇ ಹರಿಯುವ ಸ್ಥಿತಿ ಇದೆ. ಇದರಿಂದಾಗಿ  ಸಂಚಾರಕ್ಕೆ ತೊಂದರೆಯಾಗುತ್ತದೆ. ಇದರ ಬಗ್ಗೆ ಮಾಧ್ಯಮಗಳು ಎಚ್ಚರಿಸಿದರೂ ಸ್ಥಳೀಯ ಪಂಚಾಯತ್‌ ಎಚ್ಚೆತ್ತುಕೊಂಡಿಲ್ಲ ಎನ್ನುವುದು  ಜನರ ಆರೋಪ. ಈ ಬಗ್ಗೆ ಮೌಖಿಕವಾಗಿ, ಈ ಮೇಲ್ ಮೂಲಕ ಅಧಿಕಾರಿಗಳಿಗೆ ಮಾಹಿತಿ ಹಾಗೂ ದೂರು ನೀಡಿದರೂ, ಸಮಸ್ಯೆ ಬಗೆಹರಿದಿಲ್ಲ. ಕಳೆದ ವಾರ ಆರೋಗ್ಯ ಅಧಿಕಾರಿಯೊಬ್ಬರು ಬಂದು ಭೇಟಿ ನೀಡಿದ್ದಾರೆ. ಹೀಗಿದ್ದರೂ ಯಾವುದೇ ಕ್ರಮವಾಗಿಲ್ಲ ಎನ್ನುವುದೇ ಅಚ್ಚರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

2 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

3 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

3 hours ago

ಪೂರೈಕೆ ಕೊರತೆ, ಹೆಚ್ಚಿದ ಬೇಡಿಕೆ – ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆಯತ್ತ..!

ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…

4 hours ago

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

2 days ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

2 days ago