ತೆಲುಗು ಸೂಪರ್ಸ್ಟಾರ್ ಚಿರಂಜೀವಿ ಅವರೊಂದಿಗೆ ಮಹಿಳೆಯೊಬ್ಬರು ಶಬರಿಮಲೆಯ ನಿಯಮ ಉಲ್ಲಂಘಿಸಿದ್ದಾರೆ ಎಂದು ದೇವಸ್ಥಾನದ ವಿರುದ್ಧ ಸುಳ್ಳು ಮಾಹಿತಿಯನ್ನು ಆನ್ ಲೈನ್ ಮೂಲಕ ಪ್ರಚಾರ ನಡೆಸಲಾಗುತ್ತಿದೆ ಎಂದು ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿಯ ತಿರುವಾಂಕೂರು ದೇವಸ್ವಂ ಬೋರ್ಡ್ ಪದಾಧಿಕಾರಿಗಳು ಆರೋಪಿಸಿದ್ದಾರೆ.
ದೇವಾಲಯದ ನಿಯಮಗಳ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಿರಂಜೀವಿ ಮತ್ತು ಅವರ ತಂಡ ಭಾನುವಾರ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸೋಮವಾರ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಯುವತಿಯೊಬ್ಬಳು ಪ್ರವೇಶಿಸಿದ್ದರಿಂದ ದೇವಸ್ಥಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು ಎಂದು ಟಿಡಿಬಿ ಅಧ್ಯಕ್ಷ ಆನಂದಗೋಪನ್ ಹೇಳಿದ್ದಾರೆ.
ನಟನ ಜತೆಗಿದ್ದ ಮಹಿಳೆ ಈ ಹಿಂದೆಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರ ಆಧಾರ್ ಕಾರ್ಡ್ ಗಮನಿಸಿದಾಗ ಅವರ ಜನ್ಮ ದಿನಾಂಕವನ್ನು 1966 ಎಂದು ನಮೂದಿಸಲಾಗಿದೆ. ಕೆಲವರು ಏಕೆ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಈ ಸುಳ್ಳು ಮಾಹಿತಿ ಹಾಗೂ ಆನ್ಲೈನ್ ಅಭಿಯಾನದ ವಿರುದ್ಧ ಪೊಲೀಸರಿಗೆ ದೂರು ನೀಡಲು ನಾವು ನಿರ್ಧರಿಸಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದೇವೆ ಎಂದು ಆನಂದಗೋಪನ್ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…