ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.
ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆರ್ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…