Advertisement
ರಾಷ್ಟ್ರೀಯ

ಇಂದಿನಿಂದ(ಅ.16) 5 ದಿನಗಳ ಕಾಲ ಶಬರಿಮಲೆಯಲ್ಲಿ ಭಕ್ತರಿಗೆ ದರ್ಶನ ಅವಕಾಶ..

Share
ಲಾಕ್​ಡೌನ್ ನಲ್ಲಿ ಮುಚ್ಚಲಾಗಿದ್ದ ದೇವಸ್ಥಾನಗಳು ಒಂದೊಂದಾಗಿ ತೆರೆಯಲಾಗುತ್ತಿದ್ದು, ನಿಯಮಿತ ಸಂಖ್ಯೆಯಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಐದು ದಿನಗಳ ತಿಂಗಳ ಪೂಜೆಗಳು ನಡೆಯಲಿದೆ. ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ ನೀಡಲಾಗಿದೆ ಎಂದು ತ್ರವಂಕೋರ್ ದೇವಸ್ವಂ ಬೋರ್ಡ್​ (ಟಿಡಿಬಿ) ತಿಳಿಸಿದೆ. ಈಗಾಗಲೇ ವರ್ಚುವಲ್ ಕ್ಯೂ ಪೋರ್ಟಲ್​ನಲ್ಲಿ ಹೆಸರು ನೋಂದಾಯಿಸಿಕೊಂಡ ಭಕ್ತರಿಗೆ ಮಾತ್ರ ಪಂಬ ಬೇಸ್​ ಕ್ಯಾಂಪ್​ನಿಂದ ಶಬರಿಮಲೆ ಬೆಟ್ಟವನ್ನು ಏರಿ, ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದು ಹಾಗೂ ಒಂದು ದಿನಕ್ಕೆ 250 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
Advertisement
Advertisement
Advertisement
Advertisement

ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗ‌ಳನ್ನು ಮಾಡಲಾಗಿದೆ. ಪಂಪಾ ನದಿಯ ಸ್ನಾನ ಮಾಡುವ ಬದಲು ಭಕ್ತರಿಗೆ ಪಂಪಾ ಮತ್ತು ಎರುಮಲೈಯಲ್ಲಿ ಶವರ್‌ ವ್ಯವಸ್ಥೆ ಏರ್ಪಡಿಸಿದ್ದು, ಅಲ್ಲಿ ಸ್ನಾನ ಮಾಡಿ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಅಕ್ಟೋಬರ್​ 21ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.

Advertisement

ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಭಕ್ತರಿಗೆ  ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್​ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

13 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

1 day ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago