Advertisement
ರಾಷ್ಟ್ರೀಯ

ಇಂದಿನಿಂದ(ಅ.16) 5 ದಿನಗಳ ಕಾಲ ಶಬರಿಮಲೆಯಲ್ಲಿ ಭಕ್ತರಿಗೆ ದರ್ಶನ ಅವಕಾಶ..

Share
ಲಾಕ್​ಡೌನ್ ನಲ್ಲಿ ಮುಚ್ಚಲಾಗಿದ್ದ ದೇವಸ್ಥಾನಗಳು ಒಂದೊಂದಾಗಿ ತೆರೆಯಲಾಗುತ್ತಿದ್ದು, ನಿಯಮಿತ ಸಂಖ್ಯೆಯಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಐದು ದಿನಗಳ ತಿಂಗಳ ಪೂಜೆಗಳು ನಡೆಯಲಿದೆ. ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ ನೀಡಲಾಗಿದೆ ಎಂದು ತ್ರವಂಕೋರ್ ದೇವಸ್ವಂ ಬೋರ್ಡ್​ (ಟಿಡಿಬಿ) ತಿಳಿಸಿದೆ. ಈಗಾಗಲೇ ವರ್ಚುವಲ್ ಕ್ಯೂ ಪೋರ್ಟಲ್​ನಲ್ಲಿ ಹೆಸರು ನೋಂದಾಯಿಸಿಕೊಂಡ ಭಕ್ತರಿಗೆ ಮಾತ್ರ ಪಂಬ ಬೇಸ್​ ಕ್ಯಾಂಪ್​ನಿಂದ ಶಬರಿಮಲೆ ಬೆಟ್ಟವನ್ನು ಏರಿ, ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದು ಹಾಗೂ ಒಂದು ದಿನಕ್ಕೆ 250 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗ‌ಳನ್ನು ಮಾಡಲಾಗಿದೆ. ಪಂಪಾ ನದಿಯ ಸ್ನಾನ ಮಾಡುವ ಬದಲು ಭಕ್ತರಿಗೆ ಪಂಪಾ ಮತ್ತು ಎರುಮಲೈಯಲ್ಲಿ ಶವರ್‌ ವ್ಯವಸ್ಥೆ ಏರ್ಪಡಿಸಿದ್ದು, ಅಲ್ಲಿ ಸ್ನಾನ ಮಾಡಿ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಅಕ್ಟೋಬರ್​ 21ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.

ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಭಕ್ತರಿಗೆ  ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್​ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

7 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

15 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

16 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago