ಮಳೆ ಬಂತು….. ಬಂತು ಎಂದರೂ ರಾಜ್ಯದ ಬಹುತೇಕ ಕಡೆ ಬರಗಾಲದ ಛಾಯೆ | ಇನ್ನೂ ಚುರುಕುಗೊಳ್ಳದ ಮುಂಗಾರು |

June 14, 2023
12:47 PM

ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.

Advertisement
Advertisement
Advertisement
Advertisement

ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮಳೆಗಾಗಿ ಕಾಯುವ ಸ್ಥಿತಿ ಇದೆ.

Advertisement
ರಾಜ್ಯದ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭೆ  ಬತ್ತುತ್ತಿದೆ. ಇದರಿಂದ ಬೈಲಹೊಂಗಲ, ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದ್ದು, 37.7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಖಾಲಿಯಾಗಿದ್ದು, 4 ಟಿಎಂಸಿ ನೀರು ಬಾಕಿ ಉಳಿದಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ ಜಿಲ್ಲೆಯ ಜನರಿಗೆ ಕಂಟಕ ಕಾದಿದೆ. ಈಗಾಗಲೇ ಜೀವ ಜಲಕ್ಕೆ ಹಾಹಾಕಾರ ಶುರುವಾಗಿದೆ. ವಿಜಯಪುರ ಹಾವೇರಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ  ಇದೆ.  ಮಳೆ ಆಗದ ಹಿನ್ನೆಲೆಯಲ್ಲಿ ಬಿತ್ತನೆ ವಿಳಂಬ ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror