ಸುದ್ದಿಗಳು

ಮಳೆ ಬಂತು….. ಬಂತು ಎಂದರೂ ರಾಜ್ಯದ ಬಹುತೇಕ ಕಡೆ ಬರಗಾಲದ ಛಾಯೆ | ಇನ್ನೂ ಚುರುಕುಗೊಳ್ಳದ ಮುಂಗಾರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.

Advertisement
Advertisement

ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮಳೆಗಾಗಿ ಕಾಯುವ ಸ್ಥಿತಿ ಇದೆ.

ರಾಜ್ಯದ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭೆ  ಬತ್ತುತ್ತಿದೆ. ಇದರಿಂದ ಬೈಲಹೊಂಗಲ, ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದ್ದು, 37.7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಖಾಲಿಯಾಗಿದ್ದು, 4 ಟಿಎಂಸಿ ನೀರು ಬಾಕಿ ಉಳಿದಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ ಜಿಲ್ಲೆಯ ಜನರಿಗೆ ಕಂಟಕ ಕಾದಿದೆ. ಈಗಾಗಲೇ ಜೀವ ಜಲಕ್ಕೆ ಹಾಹಾಕಾರ ಶುರುವಾಗಿದೆ. ವಿಜಯಪುರ ಹಾವೇರಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ  ಇದೆ.  ಮಳೆ ಆಗದ ಹಿನ್ನೆಲೆಯಲ್ಲಿ ಬಿತ್ತನೆ ವಿಳಂಬ ಆಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

8 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

9 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

18 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

18 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

18 hours ago