Advertisement
ಸುದ್ದಿಗಳು

ಮಳೆ ಬಂತು….. ಬಂತು ಎಂದರೂ ರಾಜ್ಯದ ಬಹುತೇಕ ಕಡೆ ಬರಗಾಲದ ಛಾಯೆ | ಇನ್ನೂ ಚುರುಕುಗೊಳ್ಳದ ಮುಂಗಾರು |

Share

ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.

ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮಳೆಗಾಗಿ ಕಾಯುವ ಸ್ಥಿತಿ ಇದೆ.

ರಾಜ್ಯದ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭೆ  ಬತ್ತುತ್ತಿದೆ. ಇದರಿಂದ ಬೈಲಹೊಂಗಲ, ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದ್ದು, 37.7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಖಾಲಿಯಾಗಿದ್ದು, 4 ಟಿಎಂಸಿ ನೀರು ಬಾಕಿ ಉಳಿದಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ ಜಿಲ್ಲೆಯ ಜನರಿಗೆ ಕಂಟಕ ಕಾದಿದೆ. ಈಗಾಗಲೇ ಜೀವ ಜಲಕ್ಕೆ ಹಾಹಾಕಾರ ಶುರುವಾಗಿದೆ. ವಿಜಯಪುರ ಹಾವೇರಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ  ಇದೆ.  ಮಳೆ ಆಗದ ಹಿನ್ನೆಲೆಯಲ್ಲಿ ಬಿತ್ತನೆ ವಿಳಂಬ ಆಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago