Advertisement
ಸುದ್ದಿಗಳು

ಮಳೆ ಬಂತು….. ಬಂತು ಎಂದರೂ ರಾಜ್ಯದ ಬಹುತೇಕ ಕಡೆ ಬರಗಾಲದ ಛಾಯೆ | ಇನ್ನೂ ಚುರುಕುಗೊಳ್ಳದ ಮುಂಗಾರು |

Share

ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.

ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮಳೆಗಾಗಿ ಕಾಯುವ ಸ್ಥಿತಿ ಇದೆ.

ರಾಜ್ಯದ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭೆ  ಬತ್ತುತ್ತಿದೆ. ಇದರಿಂದ ಬೈಲಹೊಂಗಲ, ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದ್ದು, 37.7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಖಾಲಿಯಾಗಿದ್ದು, 4 ಟಿಎಂಸಿ ನೀರು ಬಾಕಿ ಉಳಿದಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ ಜಿಲ್ಲೆಯ ಜನರಿಗೆ ಕಂಟಕ ಕಾದಿದೆ. ಈಗಾಗಲೇ ಜೀವ ಜಲಕ್ಕೆ ಹಾಹಾಕಾರ ಶುರುವಾಗಿದೆ. ವಿಜಯಪುರ ಹಾವೇರಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ  ಇದೆ.  ಮಳೆ ಆಗದ ಹಿನ್ನೆಲೆಯಲ್ಲಿ ಬಿತ್ತನೆ ವಿಳಂಬ ಆಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 hour ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

10 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

17 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago