Advertisement
ಪ್ರಮುಖ

#Drought| ಉತ್ತರ ಕರ್ನಾಟಕದಲ್ಲಿ ಬರದ ಛಾಯೆ: ಒಣಗುತ್ತಿದೆ ಬೆಳೆ : ಕಾಪಾಡಿಕೊಳ್ಳಲು ಟ್ಯಾಂಕರ್ ನೀರಿಗೆ ಮೊರೆ ಹೋದ ರೈತ

Share

ಉತ್ತರ ಭಾರತ, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಜನ ಪರದಾಡುತ್ತಿದ್ರೆ, ನಮ್ಮ ಕರ್ನಾಕಟದ ಉತ್ತರ ಭಾಗದಲ್ಲಿ ಮಳೆ ಇಲ್ಲದೆ ಜನ ಪರಿತಪಿಸುವಂತಾಗಿದೆ. ತಾವು ಬಿತ್ತಿದ ಬೆಳೆ ಕಾಪಾಡಿಕೊಳ್ಳಲು ಕೃತಕ ನೀರಿನ ಪರ್ಯಾಯ ಕಂಡುಕೊಳ್ಳಬೇಕಾಗಿದೆ. ಬಿಸಿಲುನಾಡು ರಾಯಚೂರಿನಲ್ಲಿ ಬರದ ಛಾಯೆ ಆವರಿಸಿದೆ. ಮುಂಗಾರು #Mansoon ನಂಬಿ ಬಿತ್ತನೆ ಮಾಡಿದ್ದ ರೈತರಿಗೆ ಮಳೆ ಕೈ ಕೊಟ್ಟ ಹಿನ್ನೆಲೆ ಬೆಳೆ ಒಣಗಿ ಹೋಗ್ತಿವೆ. ಬೆಳೆ ಹಾಳಾಗುವ ಭಯ ರೈತರಲ್ಲಿ#Farmers ಶುರುವಾಗಿದೆ. ಇದೇ ಕಾರಣಕ್ಕೆ ಕಷ್ಟ ಪಟ್ಟು ಬೆಳೆದ ಬೆಳೆ ಕಾಪಾಡಲು ರೈತಾಪಿ ಜನ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಸಿದ್ದಾರೆಡ್ಡಿ ಅನ್ನೋ ರೈತ ತಮ್ಮ 15 ಎಕರೆ ಪ್ರದೇಶದಲ್ಲಿ  ಹತ್ತಿ ಗಿಡಗಳ ಬೆಳೆದಿದ್ದಾರೆ. ಮಳೆ ಬಾರದ ಹಿನ್ನೆಲೆ ಹತ್ತಿ ಗಿಡಗಳಿಗೆ ಕೃತಕವಾಗಿ ನೀರು ಉಣಿಸೊ ಕೆಲಸ ಮಾಡಬೇಕಾಗಿದೆ. ಈ ಭಾಗದಲ್ಲಿ ನೀರಿಲ್ಲದ ಹಿನ್ನೆಲೆ ಸಾವಿರಾರು ರೂ ಖರ್ಚು ಮಾಡಿ ಒಂದು ಟ್ಯಾಂಕರ್ ನೀರನ್ನ ತಂದು ಹತ್ತಿ ಗಿಡಗಳಿಗೆ ನೀರು ಉಣಿಸಲಾಗ್ತಿದೆ. ಒಂದು ಎಕರೆಗೆ 10-15 ಆಳುಗಳ ಬೇಕೇಬೇಕು. ಪ್ರತಿ ಆಳಿಗೆ ತಲಾ 400 ನಂತೆ 15 ಆಳುಗಳ ಮೂಲಕ ಟ್ಯಾಂಕರ್ ನಿಂದ ನೀರು ತಂದು ತಂಬಿಗೆಗಳ ಮೂಲಕ 15 ಎಕರೆ ಹೊಲದಲ್ಲಿ ಒಂದೊಂದು ಗಿಡಕ್ಕೂ ನೀರು ಉಣಿಸಲಾಗ್ತಿದೆ. ಒಂದು ಹತ್ತಿ ಗಿಡಕ್ಕೆ ಅರ್ಧ ತಂಬಿಗೆಯಷ್ಟು ನೀರನ್ನ ಹಾಕೋ ಮೂಲಕ ಬೆಳೆ ರಕ್ಷಣೆಗೆ ರೈತ ಸಿದ್ದಾರೆಡ್ಡಿ ಮುಂದಾಗಿದ್ದಾರೆ. ಹೀಗೆ ಅನಿವಾರ್ಯವಾಗಿ ನೀರನ್ನ ಉಣಿಸಬೇಕಿದೆ. ಇದಕ್ಕೆ ಎಕರೆಗೆ ಸರಿಸುಮಾರು ನಾಲ್ಕೈದು ಸಾವಿರ ಖರ್ಚಾಗತ್ತೆ. ಈ ಬಗ್ಗೆ ಹೊಸ ಸರ್ಕಾರ ರೈತರ ಕಾಳಜಿ ಮಾಡಬೇಕಿದೆ ಎಂದು ರೈತರು ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.

ಬರೀ ಇದಷ್ಟೇ ಅಲ್ಲ ಅನೇಕ ಕಡೆ ಮಳೆಯಿಲ್ಲದ ಹಿನ್ನೆಲೆ ಬಿತ್ತನೆ ಮಾಡಲಾಗಿದ್ದ ಹತ್ತಿ ಬೀಜ ಮೊಳಕೆಯೊಡೆದಿಲ್ಲ. ಮಣ್ಣಲ್ಲೇ ನಾಶವಾಗಿವೆ. ಹೀಗಾಗಿ ಇದೇ ಕೂಲಿ ಆಳುಗಳ ಮೂಲಕ ಎಲ್ಲೆಲ್ಲಿ ಹತ್ತಿ ಬೀಜ ಮೊಳಕೆಯೊಡೆದಿಲ್ವೋ ಅಲ್ಲಲ್ಲಿ ಹೊಸ ಬೀಜಗಳನ್ನ ಹಾಕೋ ಮೂಲಕ ನಾಟಿ ಮಾಡಲಾಗ್ತಿದೆ. ಹೀಗೆ ಮಳೆರಾಯ ಕೈಕೊಟ್ಟ ಹಿನ್ನೆಲೆ ರೈತರು ಕಂಗಾಲಾಗಿದ್ದು ಹೆಚ್ಚುವರಿ ಖರ್ಚು ಮಾಡಿ ಹತ್ತಿ ಗಿಡಗಳಿಗೆ ಕೃತಕವಾಗಿ ನೀರನ್ನ ಉಣಿಸುತ್ತಿದ್ದಾರೆ. ಆದ್ರೆ ಇದಿರಂದ ಒಳ್ಳೆ ಬೆಳೆ ಬರಬಹುದು ಇಲ್ಲಾ ಬಾರದೆಯೂ ಇರಬಹುದು ಅಂತ ದೇವರ ಮೇಲೆ ಭಾರ ಹಾಕಿ ಕೂತಿದ್ದಾರೆ ರೈತರು.

(ಕೃಪೆ : ಅಂತರ್ಜಾಲ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

2 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

21 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago