Advertisement
ಪ್ರಮುಖ

#Drought| ಉತ್ತರ ಕರ್ನಾಟಕದಲ್ಲಿ ಬರದ ಛಾಯೆ: ಒಣಗುತ್ತಿದೆ ಬೆಳೆ : ಕಾಪಾಡಿಕೊಳ್ಳಲು ಟ್ಯಾಂಕರ್ ನೀರಿಗೆ ಮೊರೆ ಹೋದ ರೈತ

Share

ಉತ್ತರ ಭಾರತ, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಜನ ಪರದಾಡುತ್ತಿದ್ರೆ, ನಮ್ಮ ಕರ್ನಾಕಟದ ಉತ್ತರ ಭಾಗದಲ್ಲಿ ಮಳೆ ಇಲ್ಲದೆ ಜನ ಪರಿತಪಿಸುವಂತಾಗಿದೆ. ತಾವು ಬಿತ್ತಿದ ಬೆಳೆ ಕಾಪಾಡಿಕೊಳ್ಳಲು ಕೃತಕ ನೀರಿನ ಪರ್ಯಾಯ ಕಂಡುಕೊಳ್ಳಬೇಕಾಗಿದೆ. ಬಿಸಿಲುನಾಡು ರಾಯಚೂರಿನಲ್ಲಿ ಬರದ ಛಾಯೆ ಆವರಿಸಿದೆ. ಮುಂಗಾರು #Mansoon ನಂಬಿ ಬಿತ್ತನೆ ಮಾಡಿದ್ದ ರೈತರಿಗೆ ಮಳೆ ಕೈ ಕೊಟ್ಟ ಹಿನ್ನೆಲೆ ಬೆಳೆ ಒಣಗಿ ಹೋಗ್ತಿವೆ. ಬೆಳೆ ಹಾಳಾಗುವ ಭಯ ರೈತರಲ್ಲಿ#Farmers ಶುರುವಾಗಿದೆ. ಇದೇ ಕಾರಣಕ್ಕೆ ಕಷ್ಟ ಪಟ್ಟು ಬೆಳೆದ ಬೆಳೆ ಕಾಪಾಡಲು ರೈತಾಪಿ ಜನ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಸಿದ್ದಾರೆಡ್ಡಿ ಅನ್ನೋ ರೈತ ತಮ್ಮ 15 ಎಕರೆ ಪ್ರದೇಶದಲ್ಲಿ  ಹತ್ತಿ ಗಿಡಗಳ ಬೆಳೆದಿದ್ದಾರೆ. ಮಳೆ ಬಾರದ ಹಿನ್ನೆಲೆ ಹತ್ತಿ ಗಿಡಗಳಿಗೆ ಕೃತಕವಾಗಿ ನೀರು ಉಣಿಸೊ ಕೆಲಸ ಮಾಡಬೇಕಾಗಿದೆ. ಈ ಭಾಗದಲ್ಲಿ ನೀರಿಲ್ಲದ ಹಿನ್ನೆಲೆ ಸಾವಿರಾರು ರೂ ಖರ್ಚು ಮಾಡಿ ಒಂದು ಟ್ಯಾಂಕರ್ ನೀರನ್ನ ತಂದು ಹತ್ತಿ ಗಿಡಗಳಿಗೆ ನೀರು ಉಣಿಸಲಾಗ್ತಿದೆ. ಒಂದು ಎಕರೆಗೆ 10-15 ಆಳುಗಳ ಬೇಕೇಬೇಕು. ಪ್ರತಿ ಆಳಿಗೆ ತಲಾ 400 ನಂತೆ 15 ಆಳುಗಳ ಮೂಲಕ ಟ್ಯಾಂಕರ್ ನಿಂದ ನೀರು ತಂದು ತಂಬಿಗೆಗಳ ಮೂಲಕ 15 ಎಕರೆ ಹೊಲದಲ್ಲಿ ಒಂದೊಂದು ಗಿಡಕ್ಕೂ ನೀರು ಉಣಿಸಲಾಗ್ತಿದೆ. ಒಂದು ಹತ್ತಿ ಗಿಡಕ್ಕೆ ಅರ್ಧ ತಂಬಿಗೆಯಷ್ಟು ನೀರನ್ನ ಹಾಕೋ ಮೂಲಕ ಬೆಳೆ ರಕ್ಷಣೆಗೆ ರೈತ ಸಿದ್ದಾರೆಡ್ಡಿ ಮುಂದಾಗಿದ್ದಾರೆ. ಹೀಗೆ ಅನಿವಾರ್ಯವಾಗಿ ನೀರನ್ನ ಉಣಿಸಬೇಕಿದೆ. ಇದಕ್ಕೆ ಎಕರೆಗೆ ಸರಿಸುಮಾರು ನಾಲ್ಕೈದು ಸಾವಿರ ಖರ್ಚಾಗತ್ತೆ. ಈ ಬಗ್ಗೆ ಹೊಸ ಸರ್ಕಾರ ರೈತರ ಕಾಳಜಿ ಮಾಡಬೇಕಿದೆ ಎಂದು ರೈತರು ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.

ಬರೀ ಇದಷ್ಟೇ ಅಲ್ಲ ಅನೇಕ ಕಡೆ ಮಳೆಯಿಲ್ಲದ ಹಿನ್ನೆಲೆ ಬಿತ್ತನೆ ಮಾಡಲಾಗಿದ್ದ ಹತ್ತಿ ಬೀಜ ಮೊಳಕೆಯೊಡೆದಿಲ್ಲ. ಮಣ್ಣಲ್ಲೇ ನಾಶವಾಗಿವೆ. ಹೀಗಾಗಿ ಇದೇ ಕೂಲಿ ಆಳುಗಳ ಮೂಲಕ ಎಲ್ಲೆಲ್ಲಿ ಹತ್ತಿ ಬೀಜ ಮೊಳಕೆಯೊಡೆದಿಲ್ವೋ ಅಲ್ಲಲ್ಲಿ ಹೊಸ ಬೀಜಗಳನ್ನ ಹಾಕೋ ಮೂಲಕ ನಾಟಿ ಮಾಡಲಾಗ್ತಿದೆ. ಹೀಗೆ ಮಳೆರಾಯ ಕೈಕೊಟ್ಟ ಹಿನ್ನೆಲೆ ರೈತರು ಕಂಗಾಲಾಗಿದ್ದು ಹೆಚ್ಚುವರಿ ಖರ್ಚು ಮಾಡಿ ಹತ್ತಿ ಗಿಡಗಳಿಗೆ ಕೃತಕವಾಗಿ ನೀರನ್ನ ಉಣಿಸುತ್ತಿದ್ದಾರೆ. ಆದ್ರೆ ಇದಿರಂದ ಒಳ್ಳೆ ಬೆಳೆ ಬರಬಹುದು ಇಲ್ಲಾ ಬಾರದೆಯೂ ಇರಬಹುದು ಅಂತ ದೇವರ ಮೇಲೆ ಭಾರ ಹಾಕಿ ಕೂತಿದ್ದಾರೆ ರೈತರು.

(ಕೃಪೆ : ಅಂತರ್ಜಾಲ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

8 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

9 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

14 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago