Advertisement
ಪ್ರಮುಖ

#Drought| ಉತ್ತರ ಕರ್ನಾಟಕದಲ್ಲಿ ಬರದ ಛಾಯೆ: ಒಣಗುತ್ತಿದೆ ಬೆಳೆ : ಕಾಪಾಡಿಕೊಳ್ಳಲು ಟ್ಯಾಂಕರ್ ನೀರಿಗೆ ಮೊರೆ ಹೋದ ರೈತ

Share

ಉತ್ತರ ಭಾರತ, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಜನ ಪರದಾಡುತ್ತಿದ್ರೆ, ನಮ್ಮ ಕರ್ನಾಕಟದ ಉತ್ತರ ಭಾಗದಲ್ಲಿ ಮಳೆ ಇಲ್ಲದೆ ಜನ ಪರಿತಪಿಸುವಂತಾಗಿದೆ. ತಾವು ಬಿತ್ತಿದ ಬೆಳೆ ಕಾಪಾಡಿಕೊಳ್ಳಲು ಕೃತಕ ನೀರಿನ ಪರ್ಯಾಯ ಕಂಡುಕೊಳ್ಳಬೇಕಾಗಿದೆ. ಬಿಸಿಲುನಾಡು ರಾಯಚೂರಿನಲ್ಲಿ ಬರದ ಛಾಯೆ ಆವರಿಸಿದೆ. ಮುಂಗಾರು #Mansoon ನಂಬಿ ಬಿತ್ತನೆ ಮಾಡಿದ್ದ ರೈತರಿಗೆ ಮಳೆ ಕೈ ಕೊಟ್ಟ ಹಿನ್ನೆಲೆ ಬೆಳೆ ಒಣಗಿ ಹೋಗ್ತಿವೆ. ಬೆಳೆ ಹಾಳಾಗುವ ಭಯ ರೈತರಲ್ಲಿ#Farmers ಶುರುವಾಗಿದೆ. ಇದೇ ಕಾರಣಕ್ಕೆ ಕಷ್ಟ ಪಟ್ಟು ಬೆಳೆದ ಬೆಳೆ ಕಾಪಾಡಲು ರೈತಾಪಿ ಜನ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಸಿದ್ದಾರೆಡ್ಡಿ ಅನ್ನೋ ರೈತ ತಮ್ಮ 15 ಎಕರೆ ಪ್ರದೇಶದಲ್ಲಿ  ಹತ್ತಿ ಗಿಡಗಳ ಬೆಳೆದಿದ್ದಾರೆ. ಮಳೆ ಬಾರದ ಹಿನ್ನೆಲೆ ಹತ್ತಿ ಗಿಡಗಳಿಗೆ ಕೃತಕವಾಗಿ ನೀರು ಉಣಿಸೊ ಕೆಲಸ ಮಾಡಬೇಕಾಗಿದೆ. ಈ ಭಾಗದಲ್ಲಿ ನೀರಿಲ್ಲದ ಹಿನ್ನೆಲೆ ಸಾವಿರಾರು ರೂ ಖರ್ಚು ಮಾಡಿ ಒಂದು ಟ್ಯಾಂಕರ್ ನೀರನ್ನ ತಂದು ಹತ್ತಿ ಗಿಡಗಳಿಗೆ ನೀರು ಉಣಿಸಲಾಗ್ತಿದೆ. ಒಂದು ಎಕರೆಗೆ 10-15 ಆಳುಗಳ ಬೇಕೇಬೇಕು. ಪ್ರತಿ ಆಳಿಗೆ ತಲಾ 400 ನಂತೆ 15 ಆಳುಗಳ ಮೂಲಕ ಟ್ಯಾಂಕರ್ ನಿಂದ ನೀರು ತಂದು ತಂಬಿಗೆಗಳ ಮೂಲಕ 15 ಎಕರೆ ಹೊಲದಲ್ಲಿ ಒಂದೊಂದು ಗಿಡಕ್ಕೂ ನೀರು ಉಣಿಸಲಾಗ್ತಿದೆ. ಒಂದು ಹತ್ತಿ ಗಿಡಕ್ಕೆ ಅರ್ಧ ತಂಬಿಗೆಯಷ್ಟು ನೀರನ್ನ ಹಾಕೋ ಮೂಲಕ ಬೆಳೆ ರಕ್ಷಣೆಗೆ ರೈತ ಸಿದ್ದಾರೆಡ್ಡಿ ಮುಂದಾಗಿದ್ದಾರೆ. ಹೀಗೆ ಅನಿವಾರ್ಯವಾಗಿ ನೀರನ್ನ ಉಣಿಸಬೇಕಿದೆ. ಇದಕ್ಕೆ ಎಕರೆಗೆ ಸರಿಸುಮಾರು ನಾಲ್ಕೈದು ಸಾವಿರ ಖರ್ಚಾಗತ್ತೆ. ಈ ಬಗ್ಗೆ ಹೊಸ ಸರ್ಕಾರ ರೈತರ ಕಾಳಜಿ ಮಾಡಬೇಕಿದೆ ಎಂದು ರೈತರು ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.

ಬರೀ ಇದಷ್ಟೇ ಅಲ್ಲ ಅನೇಕ ಕಡೆ ಮಳೆಯಿಲ್ಲದ ಹಿನ್ನೆಲೆ ಬಿತ್ತನೆ ಮಾಡಲಾಗಿದ್ದ ಹತ್ತಿ ಬೀಜ ಮೊಳಕೆಯೊಡೆದಿಲ್ಲ. ಮಣ್ಣಲ್ಲೇ ನಾಶವಾಗಿವೆ. ಹೀಗಾಗಿ ಇದೇ ಕೂಲಿ ಆಳುಗಳ ಮೂಲಕ ಎಲ್ಲೆಲ್ಲಿ ಹತ್ತಿ ಬೀಜ ಮೊಳಕೆಯೊಡೆದಿಲ್ವೋ ಅಲ್ಲಲ್ಲಿ ಹೊಸ ಬೀಜಗಳನ್ನ ಹಾಕೋ ಮೂಲಕ ನಾಟಿ ಮಾಡಲಾಗ್ತಿದೆ. ಹೀಗೆ ಮಳೆರಾಯ ಕೈಕೊಟ್ಟ ಹಿನ್ನೆಲೆ ರೈತರು ಕಂಗಾಲಾಗಿದ್ದು ಹೆಚ್ಚುವರಿ ಖರ್ಚು ಮಾಡಿ ಹತ್ತಿ ಗಿಡಗಳಿಗೆ ಕೃತಕವಾಗಿ ನೀರನ್ನ ಉಣಿಸುತ್ತಿದ್ದಾರೆ. ಆದ್ರೆ ಇದಿರಂದ ಒಳ್ಳೆ ಬೆಳೆ ಬರಬಹುದು ಇಲ್ಲಾ ಬಾರದೆಯೂ ಇರಬಹುದು ಅಂತ ದೇವರ ಮೇಲೆ ಭಾರ ಹಾಕಿ ಕೂತಿದ್ದಾರೆ ರೈತರು.

(ಕೃಪೆ : ಅಂತರ್ಜಾಲ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

3 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

3 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

4 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

4 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago