MIRROR FOCUS

ರಾಜ್ಯಾದ್ಯಂತ ಬರದ ಛಾಯೆ |ಬರದ ಸಂಕಷ್ಟದ ನಡುವೆ ರೈತರು ಬೆಳೆದ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಗಾಗಲೇ ಬರದಿಂದ(Drought) ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಬರ ತಾಂಡವವಾಡುತ್ತಿದೆ. ಮಳೆಯಿಲ್ಲದೇ ಅನ್ನದಾತ ಕಂಗಾಲಾಗಿದ್ದಾನೆ. ಬರದ ಛಾಯೆ ಮಧ್ಯೆ ರೈತರ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ ಕಾಟ ಶುರುವಾಗಿದೆ. ಆಳೆತ್ತರ ಬೆಳೆದ ಕಬ್ಬು ನಿಂತಲ್ಲೇ ಒಣಗಿ ರೈತರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಬರದ ಮಧ್ಯೆ ಕಬ್ಬಿಗೆ ಬಂದ ಕಾಯಿಲೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ. ಬಾಗಲಕೋಟೆ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಬರದಿಂದ ಕಂಗೆಟ್ಟ ರೈತರಿಗೆ ಒಂದೊಂದೆ‌ ಕಾಟಗಳು ಶುರುವಾಗಿವೆ.

Advertisement

ಬರದ ಮಧ್ಯೆ ಬೋರ್ವೆಲ್‌ ಮೂಲಕ ಬೆಳೆದ ಕಬ್ಬು ರೈತರಿಗೆ ಆಸರೆಯಾಗುತ್ತದೆ ಅಂದುಕೊಂಡಿದ್ದರು. ಆದರೆ ಇದೀಗ ಕಬ್ಬಿಗೆ ಕಂಟಕ‌ ಶುರುವಾಗಿದೆ. ಬೋರ್ವೆಲ್‌ ಮೂಲಕ ಬೆಳೆದ‌ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ ಶುರುವಾಗಿದೆ. ಇದರಿಂದ ಕಬ್ಬಿನ ರವದಿ ಎಲ್ಲವೂ ಒಣಗಿ ಬೇರು ಸಮೇತ ಕೊಳೆಯುತ್ತಿದೆ. ಬೆಳವಣಿಗೆ ಕುಂಠಿತವಾಗಿ ಹೆಚ್ಚಿನ ಗಣಿಕೆ ಹಿಡಿಯದೆ ಕಬ್ಬು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇಷ್ಟಾದರೂ ಸ್ಥಳಕ್ಕೆ‌ ಬಂದು ಅಧಿಕಾರಿಗಳು ವೀಕ್ಷಣೆ ಮಾಡುತ್ತಿಲ್ಲ. ಈ ಕಸ ಕಾಯಿಲೆಗೆ ಔಷಧಿ ಪರಿಹಾರ ಮಾರ್ಗ ‌ಹೇಳುತ್ತಿಲ್ಲ , ಮೊದಲೇ ಬರದಿಂದ ರೈತರು ನೊಂದಿದ್ದೇವೆ. ಕಬ್ಬು ಆಸರೆಯಾಗುತ್ತದೆ ಎಂದರೆ ಕಾಯಿಲೆ‌ ಕಾಟ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ 1,20,000 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ. 25% ಪ್ರದೇಶದ ಕಬ್ಬಿಗೆ ಈ ಕಾಯಿಲೆ ಕಾಟ ಶುರುವಾಗಿದೆ. ಇದು ಕೇವಲ ಇದೊಂದೆ ಗ್ರಾಮವಲ್ಲ, ಜಿಲ್ಲೆಯ ಬಹುತೇಕ ರೈತರ ಕಬ್ಬು ಇದೇ ಸ್ಥಿತಿ ಎದುರಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣ ಮಳೆ‌ ಕೊರತೆ. ಮಳೆ ಕಡಿಮೆಯಾದಂತೆಲ್ಲ ಹುರಿಮಲ್ಲಿಗೆ ಕಸ ಹೆಚ್ಚು ಬೆಳೆಯುತ್ತದೆ. ಈ ಕಸ ಪರಾವಲಂಭಿ ಕಸ ಆಗಿರೋದರಿಂದ ಕಬ್ಬಿನ ಬೇರಿನ ಮೇಲೆ ಇದು ಬೆಳೆಯುತ್ತದೆ.

ಕಬ್ಬಿನ ಬೇರಿನ ಮೇಲೆ ಬೆಳೆಯೋದರಿಂದ‌ ಕಬ್ಬಿನ ಎಲ್ಲ ಶಕ್ತಿ ಹೀರಿಕೊಂಡು ಬೆಳೆಯುತ್ತದೆ. ಇದರಿಂದ ಕಬ್ಬಿನ‌ ರವದಿ ಶಕ್ತಿಯಿಲ್ಲದೆ ಒಣಗಿ ಕಬ್ಬು ಹಾಳಾಗುತ್ತದೆ. ಈ ಕಸ ಹತೋಟಿ ಮಾಡಬೇಕಂದರೆ ನಾಟಿ ‌ಮಾಡುವಾಗ ಮೈಕೊರಾಜ ಜೈವಿಕ ಗೊಬ್ಬರ ಬಳಸಿ ನಾಟಿ ಮಾಡಬೇಕು. ಮೂರು ವರ್ಷ ಕಬ್ಬು ಬೆಳೆದ‌ ಮೇಲೆ ಬೆಳೆ ಬದಲಾವಣೆ ಮಾಡಬೇಕು. ಪರ್ಯಾಯ ಬೆಳೆ ಬೆಳೆಯಬೇಕು ಅದರಲ್ಲೂ ಹತ್ತಿ ಬೆಳೆಯುವ ಮೂಲಕ ಇದನ್ನು ನಿಯಂತ್ರಣ ಮಾಡಬಹುದು.

ಹತ್ತಿ ಬೇರು ಈ ಕಸ ಬೆಳೆಯೋದಕ್ಕೆ ಅವಕಾಶ ಕೊಡೋದಿಲ್ಲ. ಈ ಕಸದ ಬೀಜ ಇಪ್ಪತ್ತು ವರ್ಷ ಬೀಜ ಇರುತ್ತದೆ. ಆದ್ದರಿಂದ ಇದಕ್ಕೆ ಒಂದೇ ಪರಿಹಾರ ಅಂದರೆ ಪರ್ಯಾಯ ಬೆಳೆ. ಆದಷ್ಟು ಪರ್ಯಾಯ ಬೆಳೆಯನ್ನು ಬೆಳೆಯುವ ಮೂಲಕ ರೈತರು ಇದರ ನಿಯಂತ್ರಣ ಮಾಡಬಹುದು. ರೈತರು ಸ್ಥಳಕ್ಕೆ ಕೃಷಿ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ನಾವು ಸ್ಥಳೀಯ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಹಾಗೂ ಕೃಷಿ ಇಲಾಖೆ ಇತರೆ ಸಿಬ್ಬಂದಿ ಕಳಿಸಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಅಂತಿದ್ದಾರೆ. ಬರದಿಂದ ಕಂಗೆಟ್ಟ ರೈತರಿಗೆ ಕಬ್ಬಿಗೆ ಬಂದ ಹುರಿಮಲ್ಲಿಗೆ ಕಸ ಕಾಯಿಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

3 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

3 hours ago

ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ

ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…

4 hours ago

ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…

4 hours ago

ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ ಆಷಾಢ ಮಾಸದಲ್ಲಿ

ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago