Advertisement
MIRROR FOCUS

ರಾಜ್ಯಾದ್ಯಂತ ಬರದ ಛಾಯೆ |ಬರದ ಸಂಕಷ್ಟದ ನಡುವೆ ರೈತರು ಬೆಳೆದ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ

Share

ಈಗಾಗಲೇ ಬರದಿಂದ(Drought) ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಬರ ತಾಂಡವವಾಡುತ್ತಿದೆ. ಮಳೆಯಿಲ್ಲದೇ ಅನ್ನದಾತ ಕಂಗಾಲಾಗಿದ್ದಾನೆ. ಬರದ ಛಾಯೆ ಮಧ್ಯೆ ರೈತರ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ ಕಾಟ ಶುರುವಾಗಿದೆ. ಆಳೆತ್ತರ ಬೆಳೆದ ಕಬ್ಬು ನಿಂತಲ್ಲೇ ಒಣಗಿ ರೈತರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಬರದ ಮಧ್ಯೆ ಕಬ್ಬಿಗೆ ಬಂದ ಕಾಯಿಲೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ. ಬಾಗಲಕೋಟೆ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಬರದಿಂದ ಕಂಗೆಟ್ಟ ರೈತರಿಗೆ ಒಂದೊಂದೆ‌ ಕಾಟಗಳು ಶುರುವಾಗಿವೆ.

ಬರದ ಮಧ್ಯೆ ಬೋರ್ವೆಲ್‌ ಮೂಲಕ ಬೆಳೆದ ಕಬ್ಬು ರೈತರಿಗೆ ಆಸರೆಯಾಗುತ್ತದೆ ಅಂದುಕೊಂಡಿದ್ದರು. ಆದರೆ ಇದೀಗ ಕಬ್ಬಿಗೆ ಕಂಟಕ‌ ಶುರುವಾಗಿದೆ. ಬೋರ್ವೆಲ್‌ ಮೂಲಕ ಬೆಳೆದ‌ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ ಶುರುವಾಗಿದೆ. ಇದರಿಂದ ಕಬ್ಬಿನ ರವದಿ ಎಲ್ಲವೂ ಒಣಗಿ ಬೇರು ಸಮೇತ ಕೊಳೆಯುತ್ತಿದೆ. ಬೆಳವಣಿಗೆ ಕುಂಠಿತವಾಗಿ ಹೆಚ್ಚಿನ ಗಣಿಕೆ ಹಿಡಿಯದೆ ಕಬ್ಬು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇಷ್ಟಾದರೂ ಸ್ಥಳಕ್ಕೆ‌ ಬಂದು ಅಧಿಕಾರಿಗಳು ವೀಕ್ಷಣೆ ಮಾಡುತ್ತಿಲ್ಲ. ಈ ಕಸ ಕಾಯಿಲೆಗೆ ಔಷಧಿ ಪರಿಹಾರ ಮಾರ್ಗ ‌ಹೇಳುತ್ತಿಲ್ಲ , ಮೊದಲೇ ಬರದಿಂದ ರೈತರು ನೊಂದಿದ್ದೇವೆ. ಕಬ್ಬು ಆಸರೆಯಾಗುತ್ತದೆ ಎಂದರೆ ಕಾಯಿಲೆ‌ ಕಾಟ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ 1,20,000 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ. 25% ಪ್ರದೇಶದ ಕಬ್ಬಿಗೆ ಈ ಕಾಯಿಲೆ ಕಾಟ ಶುರುವಾಗಿದೆ. ಇದು ಕೇವಲ ಇದೊಂದೆ ಗ್ರಾಮವಲ್ಲ, ಜಿಲ್ಲೆಯ ಬಹುತೇಕ ರೈತರ ಕಬ್ಬು ಇದೇ ಸ್ಥಿತಿ ಎದುರಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣ ಮಳೆ‌ ಕೊರತೆ. ಮಳೆ ಕಡಿಮೆಯಾದಂತೆಲ್ಲ ಹುರಿಮಲ್ಲಿಗೆ ಕಸ ಹೆಚ್ಚು ಬೆಳೆಯುತ್ತದೆ. ಈ ಕಸ ಪರಾವಲಂಭಿ ಕಸ ಆಗಿರೋದರಿಂದ ಕಬ್ಬಿನ ಬೇರಿನ ಮೇಲೆ ಇದು ಬೆಳೆಯುತ್ತದೆ.

ಕಬ್ಬಿನ ಬೇರಿನ ಮೇಲೆ ಬೆಳೆಯೋದರಿಂದ‌ ಕಬ್ಬಿನ ಎಲ್ಲ ಶಕ್ತಿ ಹೀರಿಕೊಂಡು ಬೆಳೆಯುತ್ತದೆ. ಇದರಿಂದ ಕಬ್ಬಿನ‌ ರವದಿ ಶಕ್ತಿಯಿಲ್ಲದೆ ಒಣಗಿ ಕಬ್ಬು ಹಾಳಾಗುತ್ತದೆ. ಈ ಕಸ ಹತೋಟಿ ಮಾಡಬೇಕಂದರೆ ನಾಟಿ ‌ಮಾಡುವಾಗ ಮೈಕೊರಾಜ ಜೈವಿಕ ಗೊಬ್ಬರ ಬಳಸಿ ನಾಟಿ ಮಾಡಬೇಕು. ಮೂರು ವರ್ಷ ಕಬ್ಬು ಬೆಳೆದ‌ ಮೇಲೆ ಬೆಳೆ ಬದಲಾವಣೆ ಮಾಡಬೇಕು. ಪರ್ಯಾಯ ಬೆಳೆ ಬೆಳೆಯಬೇಕು ಅದರಲ್ಲೂ ಹತ್ತಿ ಬೆಳೆಯುವ ಮೂಲಕ ಇದನ್ನು ನಿಯಂತ್ರಣ ಮಾಡಬಹುದು.

ಹತ್ತಿ ಬೇರು ಈ ಕಸ ಬೆಳೆಯೋದಕ್ಕೆ ಅವಕಾಶ ಕೊಡೋದಿಲ್ಲ. ಈ ಕಸದ ಬೀಜ ಇಪ್ಪತ್ತು ವರ್ಷ ಬೀಜ ಇರುತ್ತದೆ. ಆದ್ದರಿಂದ ಇದಕ್ಕೆ ಒಂದೇ ಪರಿಹಾರ ಅಂದರೆ ಪರ್ಯಾಯ ಬೆಳೆ. ಆದಷ್ಟು ಪರ್ಯಾಯ ಬೆಳೆಯನ್ನು ಬೆಳೆಯುವ ಮೂಲಕ ರೈತರು ಇದರ ನಿಯಂತ್ರಣ ಮಾಡಬಹುದು. ರೈತರು ಸ್ಥಳಕ್ಕೆ ಕೃಷಿ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ನಾವು ಸ್ಥಳೀಯ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಹಾಗೂ ಕೃಷಿ ಇಲಾಖೆ ಇತರೆ ಸಿಬ್ಬಂದಿ ಕಳಿಸಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಅಂತಿದ್ದಾರೆ. ಬರದಿಂದ ಕಂಗೆಟ್ಟ ರೈತರಿಗೆ ಕಬ್ಬಿಗೆ ಬಂದ ಹುರಿಮಲ್ಲಿಗೆ ಕಸ ಕಾಯಿಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

3 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

14 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

15 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago