Advertisement
MIRROR FOCUS

ರಾಜ್ಯಾದ್ಯಂತ ಬರದ ಛಾಯೆ |ಬರದ ಸಂಕಷ್ಟದ ನಡುವೆ ರೈತರು ಬೆಳೆದ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ

Share

ಈಗಾಗಲೇ ಬರದಿಂದ(Drought) ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಬರ ತಾಂಡವವಾಡುತ್ತಿದೆ. ಮಳೆಯಿಲ್ಲದೇ ಅನ್ನದಾತ ಕಂಗಾಲಾಗಿದ್ದಾನೆ. ಬರದ ಛಾಯೆ ಮಧ್ಯೆ ರೈತರ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ ಕಾಟ ಶುರುವಾಗಿದೆ. ಆಳೆತ್ತರ ಬೆಳೆದ ಕಬ್ಬು ನಿಂತಲ್ಲೇ ಒಣಗಿ ರೈತರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಬರದ ಮಧ್ಯೆ ಕಬ್ಬಿಗೆ ಬಂದ ಕಾಯಿಲೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ. ಬಾಗಲಕೋಟೆ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಬರದಿಂದ ಕಂಗೆಟ್ಟ ರೈತರಿಗೆ ಒಂದೊಂದೆ‌ ಕಾಟಗಳು ಶುರುವಾಗಿವೆ.

ಬರದ ಮಧ್ಯೆ ಬೋರ್ವೆಲ್‌ ಮೂಲಕ ಬೆಳೆದ ಕಬ್ಬು ರೈತರಿಗೆ ಆಸರೆಯಾಗುತ್ತದೆ ಅಂದುಕೊಂಡಿದ್ದರು. ಆದರೆ ಇದೀಗ ಕಬ್ಬಿಗೆ ಕಂಟಕ‌ ಶುರುವಾಗಿದೆ. ಬೋರ್ವೆಲ್‌ ಮೂಲಕ ಬೆಳೆದ‌ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ ಶುರುವಾಗಿದೆ. ಇದರಿಂದ ಕಬ್ಬಿನ ರವದಿ ಎಲ್ಲವೂ ಒಣಗಿ ಬೇರು ಸಮೇತ ಕೊಳೆಯುತ್ತಿದೆ. ಬೆಳವಣಿಗೆ ಕುಂಠಿತವಾಗಿ ಹೆಚ್ಚಿನ ಗಣಿಕೆ ಹಿಡಿಯದೆ ಕಬ್ಬು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇಷ್ಟಾದರೂ ಸ್ಥಳಕ್ಕೆ‌ ಬಂದು ಅಧಿಕಾರಿಗಳು ವೀಕ್ಷಣೆ ಮಾಡುತ್ತಿಲ್ಲ. ಈ ಕಸ ಕಾಯಿಲೆಗೆ ಔಷಧಿ ಪರಿಹಾರ ಮಾರ್ಗ ‌ಹೇಳುತ್ತಿಲ್ಲ , ಮೊದಲೇ ಬರದಿಂದ ರೈತರು ನೊಂದಿದ್ದೇವೆ. ಕಬ್ಬು ಆಸರೆಯಾಗುತ್ತದೆ ಎಂದರೆ ಕಾಯಿಲೆ‌ ಕಾಟ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ 1,20,000 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ. 25% ಪ್ರದೇಶದ ಕಬ್ಬಿಗೆ ಈ ಕಾಯಿಲೆ ಕಾಟ ಶುರುವಾಗಿದೆ. ಇದು ಕೇವಲ ಇದೊಂದೆ ಗ್ರಾಮವಲ್ಲ, ಜಿಲ್ಲೆಯ ಬಹುತೇಕ ರೈತರ ಕಬ್ಬು ಇದೇ ಸ್ಥಿತಿ ಎದುರಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣ ಮಳೆ‌ ಕೊರತೆ. ಮಳೆ ಕಡಿಮೆಯಾದಂತೆಲ್ಲ ಹುರಿಮಲ್ಲಿಗೆ ಕಸ ಹೆಚ್ಚು ಬೆಳೆಯುತ್ತದೆ. ಈ ಕಸ ಪರಾವಲಂಭಿ ಕಸ ಆಗಿರೋದರಿಂದ ಕಬ್ಬಿನ ಬೇರಿನ ಮೇಲೆ ಇದು ಬೆಳೆಯುತ್ತದೆ.

ಕಬ್ಬಿನ ಬೇರಿನ ಮೇಲೆ ಬೆಳೆಯೋದರಿಂದ‌ ಕಬ್ಬಿನ ಎಲ್ಲ ಶಕ್ತಿ ಹೀರಿಕೊಂಡು ಬೆಳೆಯುತ್ತದೆ. ಇದರಿಂದ ಕಬ್ಬಿನ‌ ರವದಿ ಶಕ್ತಿಯಿಲ್ಲದೆ ಒಣಗಿ ಕಬ್ಬು ಹಾಳಾಗುತ್ತದೆ. ಈ ಕಸ ಹತೋಟಿ ಮಾಡಬೇಕಂದರೆ ನಾಟಿ ‌ಮಾಡುವಾಗ ಮೈಕೊರಾಜ ಜೈವಿಕ ಗೊಬ್ಬರ ಬಳಸಿ ನಾಟಿ ಮಾಡಬೇಕು. ಮೂರು ವರ್ಷ ಕಬ್ಬು ಬೆಳೆದ‌ ಮೇಲೆ ಬೆಳೆ ಬದಲಾವಣೆ ಮಾಡಬೇಕು. ಪರ್ಯಾಯ ಬೆಳೆ ಬೆಳೆಯಬೇಕು ಅದರಲ್ಲೂ ಹತ್ತಿ ಬೆಳೆಯುವ ಮೂಲಕ ಇದನ್ನು ನಿಯಂತ್ರಣ ಮಾಡಬಹುದು.

ಹತ್ತಿ ಬೇರು ಈ ಕಸ ಬೆಳೆಯೋದಕ್ಕೆ ಅವಕಾಶ ಕೊಡೋದಿಲ್ಲ. ಈ ಕಸದ ಬೀಜ ಇಪ್ಪತ್ತು ವರ್ಷ ಬೀಜ ಇರುತ್ತದೆ. ಆದ್ದರಿಂದ ಇದಕ್ಕೆ ಒಂದೇ ಪರಿಹಾರ ಅಂದರೆ ಪರ್ಯಾಯ ಬೆಳೆ. ಆದಷ್ಟು ಪರ್ಯಾಯ ಬೆಳೆಯನ್ನು ಬೆಳೆಯುವ ಮೂಲಕ ರೈತರು ಇದರ ನಿಯಂತ್ರಣ ಮಾಡಬಹುದು. ರೈತರು ಸ್ಥಳಕ್ಕೆ ಕೃಷಿ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ನಾವು ಸ್ಥಳೀಯ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಹಾಗೂ ಕೃಷಿ ಇಲಾಖೆ ಇತರೆ ಸಿಬ್ಬಂದಿ ಕಳಿಸಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಅಂತಿದ್ದಾರೆ. ಬರದಿಂದ ಕಂಗೆಟ್ಟ ರೈತರಿಗೆ ಕಬ್ಬಿಗೆ ಬಂದ ಹುರಿಮಲ್ಲಿಗೆ ಕಸ ಕಾಯಿಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

2 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago