ಶೈಲೇಶ್ ಅಂಬೆಕಲ್ಲು
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ಮಾಧ್ಯಮವೊಂದು ತಿರುಚಿದೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದು ಸರಿಯಲ್ಲ. ಹೀಗಾದರೆ ಸಾಮಾನ್ಯ ಜನರ ಸುದ್ದಿಗಳು ಆದ್ಯತೆ ನೆಲೆಯಲ್ಲಿ ಬರುವುದು ಹೇಗೆ. ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ ಎಂದು ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಹೇಳಿದ್ದಾರೆ.
ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ. ಒಂದು ಪತ್ರಿಕೆ ಹೊರತುಪಡಿಸಿ ಉಳಿದ ಯಾವ ಪತ್ರಿಕೆಗಳೂ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದಿಲ್ಲ. ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರವಾಗಬಹುದು. ಆದರೆ ನನ್ನ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಹಿಂದಿನ ಒಂದು ಪತ್ರಿಕೆ ಹಾಗೂ ಹಿಂದಿನ ಘಟನೆಗಳನ್ನು ಉಲ್ಲೇಖಿಸಿರುವುದೇ ಅವರ ಮಾನಸಿಕತೆಯನ್ನು ತೋರಿಸುತ್ತದೆ. ಜಾಹೀರಾತು ನೀಡದೇ ನ್ಯೂಸ್ ಹಾಕುವುದಿಲ್ಲ ಎನ್ನುವ ಧೋರಣೆ ಬದಲಾಗಬೇಕು. ನಾನು ಅಲ್ಲಿ ಮಾತನಾಡಿರುವ ವಿಡಿಯೋ ಚಿತ್ರೀಕರಣವಾಗಿದೆ. ಅದನ್ನು ಎಡಿಟ್ ಮಾಡದೆ ಯಥಾವತ್ತಾಗಿ ತೋರಿಸಲಿ ಎಂದು ಸವಾಲು ಹಾಕುತ್ತಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…