ಶೈಲೇಶ್ ಅಂಬೆಕಲ್ಲು
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ಮಾಧ್ಯಮವೊಂದು ತಿರುಚಿದೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದು ಸರಿಯಲ್ಲ. ಹೀಗಾದರೆ ಸಾಮಾನ್ಯ ಜನರ ಸುದ್ದಿಗಳು ಆದ್ಯತೆ ನೆಲೆಯಲ್ಲಿ ಬರುವುದು ಹೇಗೆ. ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ ಎಂದು ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಹೇಳಿದ್ದಾರೆ.
ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ. ಒಂದು ಪತ್ರಿಕೆ ಹೊರತುಪಡಿಸಿ ಉಳಿದ ಯಾವ ಪತ್ರಿಕೆಗಳೂ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದಿಲ್ಲ. ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರವಾಗಬಹುದು. ಆದರೆ ನನ್ನ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಹಿಂದಿನ ಒಂದು ಪತ್ರಿಕೆ ಹಾಗೂ ಹಿಂದಿನ ಘಟನೆಗಳನ್ನು ಉಲ್ಲೇಖಿಸಿರುವುದೇ ಅವರ ಮಾನಸಿಕತೆಯನ್ನು ತೋರಿಸುತ್ತದೆ. ಜಾಹೀರಾತು ನೀಡದೇ ನ್ಯೂಸ್ ಹಾಕುವುದಿಲ್ಲ ಎನ್ನುವ ಧೋರಣೆ ಬದಲಾಗಬೇಕು. ನಾನು ಅಲ್ಲಿ ಮಾತನಾಡಿರುವ ವಿಡಿಯೋ ಚಿತ್ರೀಕರಣವಾಗಿದೆ. ಅದನ್ನು ಎಡಿಟ್ ಮಾಡದೆ ಯಥಾವತ್ತಾಗಿ ತೋರಿಸಲಿ ಎಂದು ಸವಾಲು ಹಾಕುತ್ತಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…