ಶೈಲೇಶ್ ಅಂಬೆಕಲ್ಲು
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ಮಾಧ್ಯಮವೊಂದು ತಿರುಚಿದೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದು ಸರಿಯಲ್ಲ. ಹೀಗಾದರೆ ಸಾಮಾನ್ಯ ಜನರ ಸುದ್ದಿಗಳು ಆದ್ಯತೆ ನೆಲೆಯಲ್ಲಿ ಬರುವುದು ಹೇಗೆ. ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ ಎಂದು ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಹೇಳಿದ್ದಾರೆ.
ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ. ಒಂದು ಪತ್ರಿಕೆ ಹೊರತುಪಡಿಸಿ ಉಳಿದ ಯಾವ ಪತ್ರಿಕೆಗಳೂ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದಿಲ್ಲ. ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರವಾಗಬಹುದು. ಆದರೆ ನನ್ನ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಹಿಂದಿನ ಒಂದು ಪತ್ರಿಕೆ ಹಾಗೂ ಹಿಂದಿನ ಘಟನೆಗಳನ್ನು ಉಲ್ಲೇಖಿಸಿರುವುದೇ ಅವರ ಮಾನಸಿಕತೆಯನ್ನು ತೋರಿಸುತ್ತದೆ. ಜಾಹೀರಾತು ನೀಡದೇ ನ್ಯೂಸ್ ಹಾಕುವುದಿಲ್ಲ ಎನ್ನುವ ಧೋರಣೆ ಬದಲಾಗಬೇಕು. ನಾನು ಅಲ್ಲಿ ಮಾತನಾಡಿರುವ ವಿಡಿಯೋ ಚಿತ್ರೀಕರಣವಾಗಿದೆ. ಅದನ್ನು ಎಡಿಟ್ ಮಾಡದೆ ಯಥಾವತ್ತಾಗಿ ತೋರಿಸಲಿ ಎಂದು ಸವಾಲು ಹಾಕುತ್ತಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…