ಶೈಲೇಶ್ ಅಂಬೆಕಲ್ಲು
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ಮಾಧ್ಯಮವೊಂದು ತಿರುಚಿದೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದು ಸರಿಯಲ್ಲ. ಹೀಗಾದರೆ ಸಾಮಾನ್ಯ ಜನರ ಸುದ್ದಿಗಳು ಆದ್ಯತೆ ನೆಲೆಯಲ್ಲಿ ಬರುವುದು ಹೇಗೆ. ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ ಎಂದು ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಹೇಳಿದ್ದಾರೆ.
ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ. ಒಂದು ಪತ್ರಿಕೆ ಹೊರತುಪಡಿಸಿ ಉಳಿದ ಯಾವ ಪತ್ರಿಕೆಗಳೂ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದಿಲ್ಲ. ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರವಾಗಬಹುದು. ಆದರೆ ನನ್ನ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಹಿಂದಿನ ಒಂದು ಪತ್ರಿಕೆ ಹಾಗೂ ಹಿಂದಿನ ಘಟನೆಗಳನ್ನು ಉಲ್ಲೇಖಿಸಿರುವುದೇ ಅವರ ಮಾನಸಿಕತೆಯನ್ನು ತೋರಿಸುತ್ತದೆ. ಜಾಹೀರಾತು ನೀಡದೇ ನ್ಯೂಸ್ ಹಾಕುವುದಿಲ್ಲ ಎನ್ನುವ ಧೋರಣೆ ಬದಲಾಗಬೇಕು. ನಾನು ಅಲ್ಲಿ ಮಾತನಾಡಿರುವ ವಿಡಿಯೋ ಚಿತ್ರೀಕರಣವಾಗಿದೆ. ಅದನ್ನು ಎಡಿಟ್ ಮಾಡದೆ ಯಥಾವತ್ತಾಗಿ ತೋರಿಸಲಿ ಎಂದು ಸವಾಲು ಹಾಕುತ್ತಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…