ಶೈಲೇಶ್ ಅಂಬೆಕಲ್ಲು
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ಮಾಧ್ಯಮವೊಂದು ತಿರುಚಿದೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದು ಸರಿಯಲ್ಲ. ಹೀಗಾದರೆ ಸಾಮಾನ್ಯ ಜನರ ಸುದ್ದಿಗಳು ಆದ್ಯತೆ ನೆಲೆಯಲ್ಲಿ ಬರುವುದು ಹೇಗೆ. ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ ಎಂದು ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಹೇಳಿದ್ದಾರೆ.
ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ. ಒಂದು ಪತ್ರಿಕೆ ಹೊರತುಪಡಿಸಿ ಉಳಿದ ಯಾವ ಪತ್ರಿಕೆಗಳೂ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದಿಲ್ಲ. ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರವಾಗಬಹುದು. ಆದರೆ ನನ್ನ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಹಿಂದಿನ ಒಂದು ಪತ್ರಿಕೆ ಹಾಗೂ ಹಿಂದಿನ ಘಟನೆಗಳನ್ನು ಉಲ್ಲೇಖಿಸಿರುವುದೇ ಅವರ ಮಾನಸಿಕತೆಯನ್ನು ತೋರಿಸುತ್ತದೆ. ಜಾಹೀರಾತು ನೀಡದೇ ನ್ಯೂಸ್ ಹಾಕುವುದಿಲ್ಲ ಎನ್ನುವ ಧೋರಣೆ ಬದಲಾಗಬೇಕು. ನಾನು ಅಲ್ಲಿ ಮಾತನಾಡಿರುವ ವಿಡಿಯೋ ಚಿತ್ರೀಕರಣವಾಗಿದೆ. ಅದನ್ನು ಎಡಿಟ್ ಮಾಡದೆ ಯಥಾವತ್ತಾಗಿ ತೋರಿಸಲಿ ಎಂದು ಸವಾಲು ಹಾಕುತ್ತಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…