ಶೈಲೇಶ್ ಅಂಬೆಕಲ್ಲು
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ಮಾಧ್ಯಮವೊಂದು ತಿರುಚಿದೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದು ಸರಿಯಲ್ಲ. ಹೀಗಾದರೆ ಸಾಮಾನ್ಯ ಜನರ ಸುದ್ದಿಗಳು ಆದ್ಯತೆ ನೆಲೆಯಲ್ಲಿ ಬರುವುದು ಹೇಗೆ. ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ ಎಂದು ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಹೇಳಿದ್ದಾರೆ.
ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ. ಒಂದು ಪತ್ರಿಕೆ ಹೊರತುಪಡಿಸಿ ಉಳಿದ ಯಾವ ಪತ್ರಿಕೆಗಳೂ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದಿಲ್ಲ. ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರವಾಗಬಹುದು. ಆದರೆ ನನ್ನ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಹಿಂದಿನ ಒಂದು ಪತ್ರಿಕೆ ಹಾಗೂ ಹಿಂದಿನ ಘಟನೆಗಳನ್ನು ಉಲ್ಲೇಖಿಸಿರುವುದೇ ಅವರ ಮಾನಸಿಕತೆಯನ್ನು ತೋರಿಸುತ್ತದೆ. ಜಾಹೀರಾತು ನೀಡದೇ ನ್ಯೂಸ್ ಹಾಕುವುದಿಲ್ಲ ಎನ್ನುವ ಧೋರಣೆ ಬದಲಾಗಬೇಕು. ನಾನು ಅಲ್ಲಿ ಮಾತನಾಡಿರುವ ವಿಡಿಯೋ ಚಿತ್ರೀಕರಣವಾಗಿದೆ. ಅದನ್ನು ಎಡಿಟ್ ಮಾಡದೆ ಯಥಾವತ್ತಾಗಿ ತೋರಿಸಲಿ ಎಂದು ಸವಾಲು ಹಾಕುತ್ತಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…