ಶೈಲೇಶ್ ಅಂಬೆಕಲ್ಲು
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ಮಾಧ್ಯಮವೊಂದು ತಿರುಚಿದೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದು ಸರಿಯಲ್ಲ. ಹೀಗಾದರೆ ಸಾಮಾನ್ಯ ಜನರ ಸುದ್ದಿಗಳು ಆದ್ಯತೆ ನೆಲೆಯಲ್ಲಿ ಬರುವುದು ಹೇಗೆ. ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ ಎಂದು ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಹೇಳಿದ್ದಾರೆ.
ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ. ಒಂದು ಪತ್ರಿಕೆ ಹೊರತುಪಡಿಸಿ ಉಳಿದ ಯಾವ ಪತ್ರಿಕೆಗಳೂ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಹೇಳುವುದಿಲ್ಲ. ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರವಾಗಬಹುದು. ಆದರೆ ನನ್ನ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಹಿಂದಿನ ಒಂದು ಪತ್ರಿಕೆ ಹಾಗೂ ಹಿಂದಿನ ಘಟನೆಗಳನ್ನು ಉಲ್ಲೇಖಿಸಿರುವುದೇ ಅವರ ಮಾನಸಿಕತೆಯನ್ನು ತೋರಿಸುತ್ತದೆ. ಜಾಹೀರಾತು ನೀಡದೇ ನ್ಯೂಸ್ ಹಾಕುವುದಿಲ್ಲ ಎನ್ನುವ ಧೋರಣೆ ಬದಲಾಗಬೇಕು. ನಾನು ಅಲ್ಲಿ ಮಾತನಾಡಿರುವ ವಿಡಿಯೋ ಚಿತ್ರೀಕರಣವಾಗಿದೆ. ಅದನ್ನು ಎಡಿಟ್ ಮಾಡದೆ ಯಥಾವತ್ತಾಗಿ ತೋರಿಸಲಿ ಎಂದು ಸವಾಲು ಹಾಕುತ್ತಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…