#ShaktiYojane |ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ `ಶಕ್ತಿ` | ಕೋಟಿ ಕೋಟಿ ಕಾಣಿಕೆ ಸಂಗ್ರಹ ಕಂಡ ದೇವಾಲಯಗಳು…!

July 21, 2023
11:49 AM
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ಕೆಲವು ದೇವಾಲಯಗಳ ಆದಾಯ ಹೆಚ್ಚಾಗಿದೆ ಎಂಬ ವರದಿ ಇದೆ.

ಸರ್ಕಾರದ ಕೆಲವೊಂದು ಯೋಜನೆಗಳು ಫಲಾನುಭವಿಗಳಿಗೆ ಮಾತ್ರ ಪ್ರಯೋಜನವಾಗದೆ ಇನ್ನಿತರ ಮೂಲಗಳಿಗೂ ಸಹಾಯವಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಬಗ್ಗೆ ಬೇರೆ ಯಾವುದೇ ಅಸಮಾಧಾನ ಇದ್ದರೂ ಪುಣ್ಯ ಕ್ಷೇತ್ರಗಳಿಗೆ ಇದರಿಂದ ಲಾಭವೇ ಆಗಿದೆ. ಅಷ್ಟೇ ಅಲ್ಲದೆ ದೇವಾಲಯಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ತಕ್ಕ ಮಟ್ಟಿನ ಲಾಭ ತಂದಿದೆ ಎಂದೇ ಹೇಳಬಹುದು.

ಶಕ್ತಿ ಯೋಜನೆಯಿಂದ #Shakti Scheme ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಜ್ಯಾದ್ಯಂತ ದೇಗುಲಗಳಿಗೆ ನಾರಿಮಣಿಯರು ದಾಂಗುಡಿ ಇಡುತ್ತಿದ್ದಾರೆ. ವಾರಾಂತ್ಯಗಳಲ್ಲಂತು ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜೊತೆಗೆ ಕಾಣಿಕೆಗಳನ್ನೂ ಅರ್ಪಿಸುತ್ತಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಿವೆ.

ಕಳೆದ ಒಂದು ತಿಂಗಳಲ್ಲಿ 58 ದೇಗುಲಗಳ ಹುಂಡಿಯಲ್ಲಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ 11ರ ವರೆಗೆ ಪ್ರತಿಷ್ಠಿತ 58 ದೇಗುಲಗಳಲ್ಲಿ ಇ-ಹುಂಡಿ ಮೂಲಕ 19 ಕೋಟಿ ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ. ಮ್ಯಾನ್ಯುಯಲ್ ಹುಂಡಿಗಳನ್ನ ತೆರೆದರೆ ದೇವಾಲಯಗಳು ಇನ್ನಷ್ಟು ಶ್ರೀಮಂತವಾಗಲಿದೆ ಎನ್ನಲಾಗಿದೆ.

ಯಾವ ದೇವಾಲಯಗಳಿಗೆ ಎಷ್ಟು ಆದಾಯ? : 2022ರ ಜೂನ್ 11 ರಿಂದ ಜುಲೈ 15ರ ವರೆಗೆ ಹೋಲಿಕೆ ಮಾಡಿದ್ರೆ 2023 ಜೂನ್ 11 ರಿಂದ ಜುಲೈ 15ರ ವರೆಗೆ ದೇವಸ್ಥಾನಗಳ ಆದಾಯದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಾಲಯ
ಕಳೆದ ವರ್ಷ – 11.13 ಕೋಟಿ ರೂ.
ಈ ವರ್ಷ – 11.16 ಕೋಟಿ ರೂ.

ಮೈಸೂರಿನ ಚಾಮುಂಡೇಶ್ವರಿ
ಕಳೆದ ವರ್ಷ – 48.01 ಲಕ್ಷ ರೂ.
ಈ ವರ್ಷ – 3.63 ಕೋಟಿ ರೂ.

ಯಡಿಯೂರು ಸಿದ್ದಲಿಂಗೇಶ್ವರ
ಕಳೆದ ವರ್ಷ – 1.20 ಕೋಟಿ ರೂ.
ಈ ವರ್ಷ – 1.48 ಕೋಟಿ ರೂ.

ನಂಜನಗೂಡು ಶ್ರೀಕಂಠೇಶ್ವರ
ಕಳೆದ ವರ್ಷ – 1.05 ಕೋಟಿ ರೂ.
ಈ ವರ್ಷ – 1.27 ಕೋಟಿ ರೂ.

ಕೊಪ್ಪಳ ಜಿಲ್ಲೆ ಹುಲಿಗೆಮ್ಮದೇವಿ
ಕಳೆದ ವರ್ಷ – 1.02 ಕೋಟಿ ರೂ.
ಈ ವರ್ಷ – 1.41 ಕೋಟಿ ರೂ.

ಬೆಂಗಳೂರು ಬನಶಂಕರಿ
ಕಳೆದ ವರ್ಷ – 65.82 ಲಕ್ಷ ರೂ.
ಈ ವರ್ಷ – 83.64 ಲಕ್ಷ ರೂ.

ದ.ಕನ್ನಡ ಮಹಾಲಿಂಗೇಶ್ವರ
ಕಳೆದ ವರ್ಷ – 43.33 ಲಕ್ಷ ರೂ.
ಈ ವರ್ಷ – 48.09 ಲಕ್ಷ ರೂ.

ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯ

ಕಳೆದ ವರ್ಷ – 20.76 ಲಕ್ಷ ರೂ.
ಈ ವರ್ಷ – 27.98 ಲಕ್ಷ ರೂ.

ಕನಕಪುರದ ಕಬ್ಬಾಳಮ್ಮ
ಕಳೆದ ವರ್ಷ – 13.96 ಲಕ್ಷ ರೂ.
ಈ ವರ್ಷ – 19.64 ಲಕ್ಷ ರೂ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror